<p><strong>ನವದೆಹಲಿ</strong>: ತೌಕ್ತೆ ಚಂಡಮಾರುತದ ಹಿನ್ನೆಲೆಯಲ್ಲಿ ಗುಜರಾತ್ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿಗಳೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪರಿಶೀಲನಾ ಸಭೆ ನಡೆಸಿದ್ದಾರೆ.</p>.<p>ಚಂಡಮಾರುತವನ್ನು ಎದುರಿಸಲು ರಾಜ್ಯ ಸರ್ಕಾರಗಳು ಕೈಗೊಂಡ ಪರಿಹಾರ ಕಾರ್ಯ ಮತ್ತು ಮುಂಜಾಗ್ರತಾ ಕ್ರಮಗಳ ಬಗ್ಗೆ ಅಮಿತ್ ಶಾ ಮಾಹಿತಿ ಪಡೆದಿದ್ದಾರೆ.</p>.<p>ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಕೇಂದ್ರವು ರಾಜ್ಯ ಸರ್ಕಾರಗಳೊಂದಿಗೆ ಕೈಜೋಡಿಸಲಿದೆ ಎಂಬ ಭರವಸೆಯನ್ನೂ ಅಮಿತ್ ಶಾ ನೀಡಿದ್ದಾರೆ.</p>.<p>ಇಂದು(ಭಾನುವಾರ) ಬೆಳಿಗ್ಗೆ ಗೋವಾದ ಕರಾವಳಿ ಭಾಗಗಳಲ್ಲಿ ಚಂಡಮಾರುತ ಅಪ್ಪಳಿಸಿದೆ. ಇದರಿಂದಾಗಿ ಗೋವಾದಲ್ಲಿ ಭಾರಿ ಹಾನಿ ಸಂಭವಿಸಿದೆ.</p>.<p>ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗುಜರಾತ್ನತ್ತ ಸಾಗಿರುವ ಚಂಡಮಾರುತ, ಪೋರಬಂದರ್ ಹಾಗೂ ನಲಿಯಾ ನಡುವಿನ ಕರಾವಳಿ ಪ್ರದೇಶವನ್ನು ಮೇ 18ರ ವೇಳೆಗೆ ದಾಟುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಶನಿವಾರ ತಿಳಿಸಿದೆ.</p>.<p>ಮೇ 16ರಿಂದ 18ರ ವರೆಗಿನ ಅವಧಿಯಲ್ಲಿ ತೌಕ್ತೆ ಚಂಡಮಾರುತ ಹೆಚ್ಚು ತೀವ್ರವಾಗಿರಲಿದೆ ಎಂದೂ ಹವಾಮಾನ ಇಲಾಖೆ ಹೇಳಿದೆ.</p>.<p>ಚಂಡಮಾರುತದಿಂದ ಉದ್ಭವಿಸುವ ಸಂಕಷ್ಟ ಪರಿಸ್ಥಿತಿಯನ್ನು ಎದುರಿಸಲು ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆಯ (ಎನ್ಡಿಆರ್ಎಫ್) 100 ತಂಡಗಳನ್ನು ಸಜ್ಜಗೊಳಿಸಲಾಗಿದೆ. ಈ ಮೊದಲು 53 ತಂಡಗಳನ್ನು ರಚಿಸಲಾಗಿತ್ತು. ಶನಿವಾರದ ವೇಳೆ ಈ ಪ್ರಾಕೃತಿಕ ವಿಕೋಪ ತೀವ್ರ ಸ್ವರೂಪ ಪಡೆದ ಕಾರಣ, ಪರಿಹಾರ ಕಾರ್ಯಕ್ಕೆ ಚುರುಕು ನೀಡುವ ಸಂಬಂಧ ತಂಡಗಳ ಸಂಖ್ಯೆಯನ್ನು 100ಕ್ಕೆ ಹೆಚ್ಚಿಸಲಾಗಿದೆ.</p>.<p>ಕೇರಳದ ಉತ್ತರ ಹಾಗೂ ಕೇಂದ್ರ ಭಾಗದಲ್ಲಿರುವ, ಕರ್ನಾಟಕದ ದಕ್ಷಿಣ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿರುವ ಜಲಾನಯನ ಪ್ರದೇಶಗಳಲ್ಲಿ ಹೆಚ್ಚು ಹಾನಿ ಸಾಧ್ಯತೆ ಕುರಿತು ಕೇಂದ್ರೀಯ ಜಲ ಆಯೋಗ ಎಚ್ಚರಿಕೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ತೌಕ್ತೆ ಚಂಡಮಾರುತದ ಹಿನ್ನೆಲೆಯಲ್ಲಿ ಗುಜರಾತ್ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿಗಳೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪರಿಶೀಲನಾ ಸಭೆ ನಡೆಸಿದ್ದಾರೆ.</p>.<p>ಚಂಡಮಾರುತವನ್ನು ಎದುರಿಸಲು ರಾಜ್ಯ ಸರ್ಕಾರಗಳು ಕೈಗೊಂಡ ಪರಿಹಾರ ಕಾರ್ಯ ಮತ್ತು ಮುಂಜಾಗ್ರತಾ ಕ್ರಮಗಳ ಬಗ್ಗೆ ಅಮಿತ್ ಶಾ ಮಾಹಿತಿ ಪಡೆದಿದ್ದಾರೆ.</p>.<p>ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಕೇಂದ್ರವು ರಾಜ್ಯ ಸರ್ಕಾರಗಳೊಂದಿಗೆ ಕೈಜೋಡಿಸಲಿದೆ ಎಂಬ ಭರವಸೆಯನ್ನೂ ಅಮಿತ್ ಶಾ ನೀಡಿದ್ದಾರೆ.</p>.<p>ಇಂದು(ಭಾನುವಾರ) ಬೆಳಿಗ್ಗೆ ಗೋವಾದ ಕರಾವಳಿ ಭಾಗಗಳಲ್ಲಿ ಚಂಡಮಾರುತ ಅಪ್ಪಳಿಸಿದೆ. ಇದರಿಂದಾಗಿ ಗೋವಾದಲ್ಲಿ ಭಾರಿ ಹಾನಿ ಸಂಭವಿಸಿದೆ.</p>.<p>ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗುಜರಾತ್ನತ್ತ ಸಾಗಿರುವ ಚಂಡಮಾರುತ, ಪೋರಬಂದರ್ ಹಾಗೂ ನಲಿಯಾ ನಡುವಿನ ಕರಾವಳಿ ಪ್ರದೇಶವನ್ನು ಮೇ 18ರ ವೇಳೆಗೆ ದಾಟುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಶನಿವಾರ ತಿಳಿಸಿದೆ.</p>.<p>ಮೇ 16ರಿಂದ 18ರ ವರೆಗಿನ ಅವಧಿಯಲ್ಲಿ ತೌಕ್ತೆ ಚಂಡಮಾರುತ ಹೆಚ್ಚು ತೀವ್ರವಾಗಿರಲಿದೆ ಎಂದೂ ಹವಾಮಾನ ಇಲಾಖೆ ಹೇಳಿದೆ.</p>.<p>ಚಂಡಮಾರುತದಿಂದ ಉದ್ಭವಿಸುವ ಸಂಕಷ್ಟ ಪರಿಸ್ಥಿತಿಯನ್ನು ಎದುರಿಸಲು ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆಯ (ಎನ್ಡಿಆರ್ಎಫ್) 100 ತಂಡಗಳನ್ನು ಸಜ್ಜಗೊಳಿಸಲಾಗಿದೆ. ಈ ಮೊದಲು 53 ತಂಡಗಳನ್ನು ರಚಿಸಲಾಗಿತ್ತು. ಶನಿವಾರದ ವೇಳೆ ಈ ಪ್ರಾಕೃತಿಕ ವಿಕೋಪ ತೀವ್ರ ಸ್ವರೂಪ ಪಡೆದ ಕಾರಣ, ಪರಿಹಾರ ಕಾರ್ಯಕ್ಕೆ ಚುರುಕು ನೀಡುವ ಸಂಬಂಧ ತಂಡಗಳ ಸಂಖ್ಯೆಯನ್ನು 100ಕ್ಕೆ ಹೆಚ್ಚಿಸಲಾಗಿದೆ.</p>.<p>ಕೇರಳದ ಉತ್ತರ ಹಾಗೂ ಕೇಂದ್ರ ಭಾಗದಲ್ಲಿರುವ, ಕರ್ನಾಟಕದ ದಕ್ಷಿಣ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿರುವ ಜಲಾನಯನ ಪ್ರದೇಶಗಳಲ್ಲಿ ಹೆಚ್ಚು ಹಾನಿ ಸಾಧ್ಯತೆ ಕುರಿತು ಕೇಂದ್ರೀಯ ಜಲ ಆಯೋಗ ಎಚ್ಚರಿಕೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>