ಚಂಡಮಾರುತದಿಂದ ಉದ್ಭವಿಸುವ ಸಂಕಷ್ಟ ಪರಿಸ್ಥಿತಿಯನ್ನು ಎದುರಿಸಲು ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆಯ (ಎನ್ಡಿಆರ್ಎಫ್) 100 ತಂಡಗಳನ್ನು ಸಜ್ಜಗೊಳಿಸಲಾಗಿದೆ. ಈ ಮೊದಲು 53 ತಂಡಗಳನ್ನು ರಚಿಸಲಾಗಿತ್ತು. ಶನಿವಾರದ ವೇಳೆ ಈ ಪ್ರಾಕೃತಿಕ ವಿಕೋಪ ತೀವ್ರ ಸ್ವರೂಪ ಪಡೆದ ಕಾರಣ, ಪರಿಹಾರ ಕಾರ್ಯಕ್ಕೆ ಚುರುಕು ನೀಡುವ ಸಂಬಂಧ ತಂಡಗಳ ಸಂಖ್ಯೆಯನ್ನು 100ಕ್ಕೆ ಹೆಚ್ಚಿಸಲಾಗಿದೆ.