ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ದೆಹಲಿ ಗಡಿಗಳಲ್ಲಿ ಸುಮಾರು ನಾಲ್ಕು ವಾರಗಳಿಂದ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಪ್ರತಿನಿಧಿಗಳ ಜತೆ ಸರ್ಕಾರವು ಹಲವು ಸುತ್ತುಗಳ ಮಾತುಕತೆ ನಡೆಸಿದ್ದರೂ ಒಮ್ಮತಕ್ಕೆ ಬರುವಲ್ಲಿ ವಿಫಲವಾಗಿದೆ. ಕಾಯ್ದೆ ಹಿಂಪಡೆಯಲಾಗದು, ತಿದ್ದುಪಡಿಗೆ ಸಿದ್ಧ ಎಂದು ಸರ್ಕಾರ ಹೇಳಿದ್ದರೆ, ರೈತರೂ ತಮ್ಮ ನಿಲುವಿಗೇ ಅಂಟಿಕೊಂಡಿದ್ದಾರೆ.