<p><strong>ಪಟ್ನಾ:</strong> ದೇಶಭಕ್ತಿ ಭಾವನೆಯನ್ನು ಜನರಲ್ಲಿ ಪಸರಿಸುವುದಕ್ಕಾಗಿ ನಾಲ್ಕು ದಿನಗಳನ್ನು ಮೀಸಲಿಡಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ನೀಡಿದ್ದಾರೆ. ಸ್ವಾತಂತ್ರ್ಯೋತ್ಸವ ಪ್ರಯುಕ್ತ ಅವರು ಈ ಮನವಿ ಮಾಡಿದ್ದಾರೆ.</p>.<p>ಪಕ್ಷದ ಜಂಟಿ ರಾಷ್ಟ್ರೀಯ ಕಾರ್ಯಕಾರಿ ಸಭೆಯ ಸಮಾರೋಪದ ಸಂದರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ.</p>.<p><a href="https://www.prajavani.net/india-news/bjp-to-fight-2024-ls-2025-bihar-polls-with-present-alliance-says-arun-singh-959383.html" itemprop="url">ಬಿಹಾರದಲ್ಲಿ ಈಗಿನ ಮೈತ್ರಿಯೊಂದಿಗೇ 2024ರ ಲೋಕಸಭೆ, 2025ರ ಚುನಾವಣೆ: ಅರುಣ್ ಸಿಂಗ್ </a></p>.<p>‘ಆಗಸ್ಟ್ 9ರಿಂದ 12ರ ವರೆಗೆ ನಾಲ್ಕು ದಿನಗಳನ್ನು ದೇಶಭಕ್ತಿಯ ಭಾವನೆಯನ್ನು ಜನರಲ್ಲಿ ಹರಡುವುದಕ್ಕಾಗಿ ಮೀಸಲಿಡಿ. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಈ ಕೆಲಸ ಮಾಡಿ’ ಎಂದು ಅವರು ಕರೆ ನೀಡಿದ್ದಾರೆ.</p>.<p>ಕೇಂದ್ರ ಸರ್ಕಾರವು ದಲಿತರಿಗೆ, ಬುಡಕಟ್ಟು ಜನರಿಗೆ, ಒಬಿಸಿ ವರ್ಗದವರಿಗೆ ಹಾಗೂ ಇತರ ದುರ್ಬಲ ವರ್ಗದವರಿಗಾಗಿ ಮಾಡಿರುವ ಕೆಲಸಗಳನ್ನು ಬೂತ್ ಮಟ್ಟದಲ್ಲಿ ಜನರನ್ನು ಭೇಟಿಮಾಡಿ ಮನವರಿಕೆ ಮಾಡಿಕೊಡಬೇಕು ಎಂದೂ ಕಾರ್ಯಕರ್ತರಿಗೆ ಶಾ ಸೂಚಿಸಿದ್ದಾರೆ.</p>.<p>2024ರಲ್ಲಿ ಮತ್ತೆ ನರೇಂದ್ರ ಮೋದಿ ಅವರಿಗೆ ಅಧಿಕಾರ ದೊರೆಯುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದೂ ಅವರು ಕಾರ್ಯಕರ್ತರಿಗೆ ಹೇಳಿದ್ದಾರೆ.</p>.<p><a href="https://www.prajavani.net/business/commerce-news/commercial-lpg-cylinder-price-cut-by-rs-36-from-1st-august-2022-959386.html" itemprop="url">ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರ ₹36 ಇಳಿಕೆ </a></p>.<p>ಜಂಟಿ ರಾಷ್ಟ್ರೀಯ ಕಾರ್ಯಕಾರಿ ಸಭೆಯ ಸಮಾರೋಪದ ಬಳಿಕ ಮಾತನಾಡಿದ್ದ ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಸಹ ಇದೇ ಮಾತುಗಳನ್ನಾಡಿದ್ದರು. ಬಿಹಾರದಲ್ಲಿ 2024ರ ಲೋಕಸಭೆ ಚುನಾವಣೆ ಹಾಗೂ 2025ರ ವಿಧಾನಸಭೆ ಚುನಾವಣೆಯನ್ನು ಬಿಜೆಪಿಯು ಈಗಿನ ಮೈತ್ರಿಯೊಂದಿಗೇ ಎದುರಿಸಲಿದೆ ಎಂದೂ ಅವರು ಸ್ಪಷ್ಟಪಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ದೇಶಭಕ್ತಿ ಭಾವನೆಯನ್ನು ಜನರಲ್ಲಿ ಪಸರಿಸುವುದಕ್ಕಾಗಿ ನಾಲ್ಕು ದಿನಗಳನ್ನು ಮೀಸಲಿಡಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ನೀಡಿದ್ದಾರೆ. ಸ್ವಾತಂತ್ರ್ಯೋತ್ಸವ ಪ್ರಯುಕ್ತ ಅವರು ಈ ಮನವಿ ಮಾಡಿದ್ದಾರೆ.</p>.<p>ಪಕ್ಷದ ಜಂಟಿ ರಾಷ್ಟ್ರೀಯ ಕಾರ್ಯಕಾರಿ ಸಭೆಯ ಸಮಾರೋಪದ ಸಂದರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ.</p>.<p><a href="https://www.prajavani.net/india-news/bjp-to-fight-2024-ls-2025-bihar-polls-with-present-alliance-says-arun-singh-959383.html" itemprop="url">ಬಿಹಾರದಲ್ಲಿ ಈಗಿನ ಮೈತ್ರಿಯೊಂದಿಗೇ 2024ರ ಲೋಕಸಭೆ, 2025ರ ಚುನಾವಣೆ: ಅರುಣ್ ಸಿಂಗ್ </a></p>.<p>‘ಆಗಸ್ಟ್ 9ರಿಂದ 12ರ ವರೆಗೆ ನಾಲ್ಕು ದಿನಗಳನ್ನು ದೇಶಭಕ್ತಿಯ ಭಾವನೆಯನ್ನು ಜನರಲ್ಲಿ ಹರಡುವುದಕ್ಕಾಗಿ ಮೀಸಲಿಡಿ. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಈ ಕೆಲಸ ಮಾಡಿ’ ಎಂದು ಅವರು ಕರೆ ನೀಡಿದ್ದಾರೆ.</p>.<p>ಕೇಂದ್ರ ಸರ್ಕಾರವು ದಲಿತರಿಗೆ, ಬುಡಕಟ್ಟು ಜನರಿಗೆ, ಒಬಿಸಿ ವರ್ಗದವರಿಗೆ ಹಾಗೂ ಇತರ ದುರ್ಬಲ ವರ್ಗದವರಿಗಾಗಿ ಮಾಡಿರುವ ಕೆಲಸಗಳನ್ನು ಬೂತ್ ಮಟ್ಟದಲ್ಲಿ ಜನರನ್ನು ಭೇಟಿಮಾಡಿ ಮನವರಿಕೆ ಮಾಡಿಕೊಡಬೇಕು ಎಂದೂ ಕಾರ್ಯಕರ್ತರಿಗೆ ಶಾ ಸೂಚಿಸಿದ್ದಾರೆ.</p>.<p>2024ರಲ್ಲಿ ಮತ್ತೆ ನರೇಂದ್ರ ಮೋದಿ ಅವರಿಗೆ ಅಧಿಕಾರ ದೊರೆಯುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದೂ ಅವರು ಕಾರ್ಯಕರ್ತರಿಗೆ ಹೇಳಿದ್ದಾರೆ.</p>.<p><a href="https://www.prajavani.net/business/commerce-news/commercial-lpg-cylinder-price-cut-by-rs-36-from-1st-august-2022-959386.html" itemprop="url">ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರ ₹36 ಇಳಿಕೆ </a></p>.<p>ಜಂಟಿ ರಾಷ್ಟ್ರೀಯ ಕಾರ್ಯಕಾರಿ ಸಭೆಯ ಸಮಾರೋಪದ ಬಳಿಕ ಮಾತನಾಡಿದ್ದ ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಸಹ ಇದೇ ಮಾತುಗಳನ್ನಾಡಿದ್ದರು. ಬಿಹಾರದಲ್ಲಿ 2024ರ ಲೋಕಸಭೆ ಚುನಾವಣೆ ಹಾಗೂ 2025ರ ವಿಧಾನಸಭೆ ಚುನಾವಣೆಯನ್ನು ಬಿಜೆಪಿಯು ಈಗಿನ ಮೈತ್ರಿಯೊಂದಿಗೇ ಎದುರಿಸಲಿದೆ ಎಂದೂ ಅವರು ಸ್ಪಷ್ಟಪಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>