ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರವೀಂದ್ರನಾಥ ಟ್ಯಾಗೋರ್‌ಗೆ ಗೌರವ ಅರ್ಪಿಸಿದ ಅಮಿತ್‌ ಶಾ

Last Updated 20 ಡಿಸೆಂಬರ್ 2020, 8:34 IST
ಅಕ್ಷರ ಗಾತ್ರ

ಶಾಂತಿನಿಕೇತನ(ಪಶ್ಚಿಮ ಬಂಗಾಳ): ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಭಾನುವಾರ ವಿಶ್ವ–ಭಾರತಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ, ಇಲ್ಲಿನ ರವೀಂದ್ರ ಭವನದಲ್ಲಿ ಗುರುದೇವ್‌ ರವೀಂದ್ರನಾಥ ಟ್ಯಾಗೋರ್‌ ಅವರ ಗೌರವಾರ್ಥ ನಮನ ಸಲ್ಲಿಸಿದರು.

ಅಮಿತ್‌ ಶಾ ಅವರು ಉಪಾಸನಾ ಗೃಹ (ಪ್ರಾರ್ಥನಾ ಗೃಹ) ಮತ್ತು ಸಂಗೀತ ಭವನಕ್ಕೆ ಭೇಟಿ ನೀಡಲಿದ್ದಾರೆ. ಇಲ್ಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿದ್ದು, ಕಾರ್ಯಕ್ರಮದಲ್ಲಿ ರವೀಂದ್ರನಾಥ ಟ್ಯಾಗೋರ್‌ ಅವರು ರಚಿಸಿದ ಗೀತೆಗಳನ್ನು ಹಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಮಿತ್‌ ಶಾ ಬಿಗಿ ಭದ್ರತೆಯೊಂದಿಗೆ ವಿಶ್ವವಿದ್ಯಾಲಯಕ್ಕೆ ಆಗಮಿಸಿದರು. ಸುಮಾರು ಒಂದೂವರೆ ಗಂಟೆಯ ತನಕ ಅಲ್ಲಿ ಇದ್ದರು. ಪಶ್ಚಿಮ ಬಂಗಾಳದಲ್ಲಿ ಎರಡು ದಿನದ ಪ್ರವಾಸದಲ್ಲಿರುವ ಅಮಿತ್ ಶಾ ಅವರು, ಎರಡನೇ ದಿನ ರವೀಂದ್ರ ಭವನಕ್ಕೆ ಭೇಟಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT