ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಮೃತ್ಪಾಲ್ ಅವರನ್ನು ಅಮೃತಸರದಲ್ಲಿರುವ ಆತನ ಹಳ್ಳಿಯಲ್ಲೇ ಬಂಧಿಸಬಹುದಿತ್ತು. ಆದರೆ ಪತ್ತೆ ಕಾರ್ಯಾಚರಣೆ ಜಲಂಧರ್ ಪ್ರದೇಶದಲ್ಲಿ ನಡೆಯುತ್ತಿದೆ. ಈ ಕ್ಷೇತ್ರದಲ್ಲಿ ಲೋಕಸಭಾ ಸ್ಥಾನಕ್ಕೆ ಉಪಚುನಾವಣೆ ನಡೆಯಲಿರುವ ಕಾರಣ ಸರ್ಕಾರವು ರಾಜಕೀಯ ತಂತ್ರಗಾರಿಕೆ ಮೂಲಕ ಅಮೃತ್ಪಾಲ್ರ ಶೋಧದ ನಾಟಕವಾಡುತ್ತಿದೆ. ಈ ಸಂಬಂಧ ಮುಖ್ಯಮಂತ್ರಿ ಭಗವಂತ ಮಾನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು‘ ಎಂದು ಒತ್ತಾಯಿಸಿದರು.