ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಜಂ ಖಾನ್‌ಗೆ ಜಾಮೀನು ವಿಳಂಬ: ಅಲಿಗಡ ವಿವಿ ವಿದ್ಯಾರ್ಥಿಗಳ ಪ್ರತಿಭಟನೆ

Last Updated 27 ಜುಲೈ 2021, 10:31 IST
ಅಕ್ಷರ ಗಾತ್ರ

ಅಲಿಗಡ(ಉತ್ತರ ಪ್ರದೇಶ): ರಾಜಕೀಯ ಕಾರಣಗಳಿಂದಾಗಿ ಸಂಸದ ಅಜಂ ಖಾನ್‌ಗೆ ಉದ್ದೇಶಪೂರ್ವಕವಾಗಿ ಜಾಮೀನು ನೀಡುವುದಕ್ಕೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸೋಮವಾರ ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಸಮಾಜವಾದಿ ಪಕ್ಷದ ಸಂಸದ ಅಜಂ ಖಾನ್ ಅವರ ಆರೋಗ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳು, ತಕ್ಷಣವೇ ಜಾಮೀನು ನೀಡುವಂತೆ ಒತ್ತಾಯಿಸಿ, ರಾಷ್ಟ್ರಪತಿ ಮತ್ತು ಸುಪ್ರೀಂ ಕೋರ್ಟ್‌ ಮುಖ್ಯನ್ಯಾಯಮೂರ್ತಿಯವರಿಗೆ ಮನವಿ ಸಲ್ಲಿಸಿದ್ದಾರೆ.

ಪ್ರತಿಭಟನೆ ನಂತರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಸಂಘದ ಮುಖಂಡ ವಾಸಿಮ್ ಅಲಿ ಮನವಿ ಪತ್ರಗಳನ್ನು ಮಾಧ್ಯಮದವರಿಗೆ ನೀಡಿದರು. ವಿದ್ಯಾರ್ಥಿ ಸಂಘದ ಮಾಜಿ ಕಾರ್ಯದರ್ಶಿ ಹುಜೈಫ್‌ ಅಮೀರ್ ಸುದ್ದಿಗಾರರೊಂದಿಗೆ ಮಾತನಾಡಿ, ‘ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್, ತಮ್ಮ ಪಕ್ಷದ ಸದಸ್ಯ ಅಜಂ ಖಾನ್ ಅವರ ಬೆಂಬಲಕ್ಕೆ ನಿಲ್ಲದೆ ಇರುವ ಬಗ್ಗೆ ವಿ.ವಿಯ ವಿದ್ಯಾರ್ಥಿಗಳು ತುಂಬಾ ಬೇಸರಗೊಂಡಿದ್ದಾರೆ‘ ಎಂದು ಹೇಳಿದರು.

ವಂಚನೆ ಮತ್ತಿತರ ಪ್ರಕರಣಗಳಲ್ಲಿ ಅಜಂ ಖಾನ್ ಅವರನ್ನು ಸಿತಾಪುರ್ ಜೈಲಿಗೆ ಕಳುಹಿಸಲಾಗಿತ್ತು. ಅನಾರೋಗ್ಯದ ಕಾರಣ ಇತ್ತೀಚೆಗೆ ಅವರನ್ನು ಲಖನೌ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT