<p><strong>ಅಲಿಗಡ(ಉತ್ತರ ಪ್ರದೇಶ):</strong> ರಾಜಕೀಯ ಕಾರಣಗಳಿಂದಾಗಿ ಸಂಸದ ಅಜಂ ಖಾನ್ಗೆ ಉದ್ದೇಶಪೂರ್ವಕವಾಗಿ ಜಾಮೀನು ನೀಡುವುದಕ್ಕೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸೋಮವಾರ ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.</p>.<p>ಸಮಾಜವಾದಿ ಪಕ್ಷದ ಸಂಸದ ಅಜಂ ಖಾನ್ ಅವರ ಆರೋಗ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳು, ತಕ್ಷಣವೇ ಜಾಮೀನು ನೀಡುವಂತೆ ಒತ್ತಾಯಿಸಿ, ರಾಷ್ಟ್ರಪತಿ ಮತ್ತು ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿಯವರಿಗೆ ಮನವಿ ಸಲ್ಲಿಸಿದ್ದಾರೆ.</p>.<p>ಪ್ರತಿಭಟನೆ ನಂತರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಸಂಘದ ಮುಖಂಡ ವಾಸಿಮ್ ಅಲಿ ಮನವಿ ಪತ್ರಗಳನ್ನು ಮಾಧ್ಯಮದವರಿಗೆ ನೀಡಿದರು. ವಿದ್ಯಾರ್ಥಿ ಸಂಘದ ಮಾಜಿ ಕಾರ್ಯದರ್ಶಿ ಹುಜೈಫ್ ಅಮೀರ್ ಸುದ್ದಿಗಾರರೊಂದಿಗೆ ಮಾತನಾಡಿ, ‘ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್, ತಮ್ಮ ಪಕ್ಷದ ಸದಸ್ಯ ಅಜಂ ಖಾನ್ ಅವರ ಬೆಂಬಲಕ್ಕೆ ನಿಲ್ಲದೆ ಇರುವ ಬಗ್ಗೆ ವಿ.ವಿಯ ವಿದ್ಯಾರ್ಥಿಗಳು ತುಂಬಾ ಬೇಸರಗೊಂಡಿದ್ದಾರೆ‘ ಎಂದು ಹೇಳಿದರು.</p>.<p>ವಂಚನೆ ಮತ್ತಿತರ ಪ್ರಕರಣಗಳಲ್ಲಿ ಅಜಂ ಖಾನ್ ಅವರನ್ನು ಸಿತಾಪುರ್ ಜೈಲಿಗೆ ಕಳುಹಿಸಲಾಗಿತ್ತು. ಅನಾರೋಗ್ಯದ ಕಾರಣ ಇತ್ತೀಚೆಗೆ ಅವರನ್ನು ಲಖನೌ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/india-news/pegasus-spyware-senior-journalists-move-sc-seeking-independent-enquiry-into-govt-snooping-852147.html" target="_blank">ಪೆಗಾಸಸ್ ಗೂಢಚರ್ಯೆ: ಸ್ವತಂತ್ರ ತನಿಖೆಗೆ ಆಗ್ರಹ, ಪತ್ರಕರ್ತರಿಂದ ಸುಪ್ರೀಂಗೆ ಅರ್ಜಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಲಿಗಡ(ಉತ್ತರ ಪ್ರದೇಶ):</strong> ರಾಜಕೀಯ ಕಾರಣಗಳಿಂದಾಗಿ ಸಂಸದ ಅಜಂ ಖಾನ್ಗೆ ಉದ್ದೇಶಪೂರ್ವಕವಾಗಿ ಜಾಮೀನು ನೀಡುವುದಕ್ಕೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸೋಮವಾರ ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.</p>.<p>ಸಮಾಜವಾದಿ ಪಕ್ಷದ ಸಂಸದ ಅಜಂ ಖಾನ್ ಅವರ ಆರೋಗ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳು, ತಕ್ಷಣವೇ ಜಾಮೀನು ನೀಡುವಂತೆ ಒತ್ತಾಯಿಸಿ, ರಾಷ್ಟ್ರಪತಿ ಮತ್ತು ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿಯವರಿಗೆ ಮನವಿ ಸಲ್ಲಿಸಿದ್ದಾರೆ.</p>.<p>ಪ್ರತಿಭಟನೆ ನಂತರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಸಂಘದ ಮುಖಂಡ ವಾಸಿಮ್ ಅಲಿ ಮನವಿ ಪತ್ರಗಳನ್ನು ಮಾಧ್ಯಮದವರಿಗೆ ನೀಡಿದರು. ವಿದ್ಯಾರ್ಥಿ ಸಂಘದ ಮಾಜಿ ಕಾರ್ಯದರ್ಶಿ ಹುಜೈಫ್ ಅಮೀರ್ ಸುದ್ದಿಗಾರರೊಂದಿಗೆ ಮಾತನಾಡಿ, ‘ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್, ತಮ್ಮ ಪಕ್ಷದ ಸದಸ್ಯ ಅಜಂ ಖಾನ್ ಅವರ ಬೆಂಬಲಕ್ಕೆ ನಿಲ್ಲದೆ ಇರುವ ಬಗ್ಗೆ ವಿ.ವಿಯ ವಿದ್ಯಾರ್ಥಿಗಳು ತುಂಬಾ ಬೇಸರಗೊಂಡಿದ್ದಾರೆ‘ ಎಂದು ಹೇಳಿದರು.</p>.<p>ವಂಚನೆ ಮತ್ತಿತರ ಪ್ರಕರಣಗಳಲ್ಲಿ ಅಜಂ ಖಾನ್ ಅವರನ್ನು ಸಿತಾಪುರ್ ಜೈಲಿಗೆ ಕಳುಹಿಸಲಾಗಿತ್ತು. ಅನಾರೋಗ್ಯದ ಕಾರಣ ಇತ್ತೀಚೆಗೆ ಅವರನ್ನು ಲಖನೌ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/india-news/pegasus-spyware-senior-journalists-move-sc-seeking-independent-enquiry-into-govt-snooping-852147.html" target="_blank">ಪೆಗಾಸಸ್ ಗೂಢಚರ್ಯೆ: ಸ್ವತಂತ್ರ ತನಿಖೆಗೆ ಆಗ್ರಹ, ಪತ್ರಕರ್ತರಿಂದ ಸುಪ್ರೀಂಗೆ ಅರ್ಜಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>