ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈಷ್ಣೋ ದೇವಿ ಭವನದಲ್ಲಿ ಕಾಲ್ತುಳಿತ: ಮೃತರ ಕುಟುಂಬಕ್ಕೆ ತಲಾ ₹ 12 ಲಕ್ಷ ಪರಿಹಾರ

Last Updated 1 ಜನವರಿ 2022, 5:24 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮ ಮತ್ತು ಕಾಶ್ಮೀರದ ಕತ್ರಾದಲ್ಲಿರುವ ಮಾತಾ ವೈಷ್ಣೋ ದೇವಿ ಭವನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 12 ಮಂದಿ ಯಾತ್ರಾರ್ಥಿಗಳು ಮೃತಪಟ್ಟಿದ್ದು, 13ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಮೃತರ ಕುಟುಂಬಕ್ಕೆ ತಲಾ ₹ 10 ಲಕ್ಷ ಮತ್ತು ಗಾಯಾಳುಗಳಿಗೆ ತಲಾ ₹ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಪ್ರಧಾನ ಮಂತ್ರಿ ವಿಪತ್ತು ಪರಿಹಾರ ನಿಧಿಯಿಂದಲೂ ಮೃತರ ಕುಟುಂಬಕ್ಕೆ ತಲಾ ₹ 2 ಲಕ್ಷ ಮತ್ತು ಗಾಯಾಳುಗಳಿಗೆ ತಲಾ ₹ 50,000 ಪರಿಹಾರ ಘೋಷಿಸಲಾಗಿದೆ.

ಮಧ್ಯರಾತ್ರಿ 2.45ರ ಸುಮಾರಿಗೆ ಯಾತ್ರಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ತಳ್ಳಾಡಿದ್ದಾರೆ. ಈ ಸಂದರ್ಭ ಕಾಲ್ತುಳಿತ ಸಂಭವಿಸಿದೆ.

ವೈಷ್ಣೋ ದೇವಿ ಮಂದಿರದ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಅತೀವ ದುಃಖ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ, ಯಾತ್ರಾರ್ಥಿಗಳ ನೆರವಿಗಾಗಿ ಹೆಲ್ಪ್‌ಲೈನ್ ಸ್ಥಾಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT