ತಿರುವನಂತಪುರ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ನಡುವಿನ ಸಂಘರ್ಷ ಮತ್ತೊಂದು ಹಂತ ತಲುಪಿದೆ. ವಿಜಯನ್ ಅವರು ಸಂಪ್ರದಾಯ ಮುರಿದಿದ್ದಾರೆ, ಶಿಷ್ಟಾಚಾರ ಉಲ್ಲಂಘಿಸಿದ್ದಾರೆ ಎಂದು ದೂರಿ ಶುಕ್ರವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಅವರು ಪತ್ರ ಬರೆದಿದ್ದಾರೆ.