<p><strong>ನವದೆಹಲಿ</strong>: ಎಲ್ಲ ಕ್ಷೇತ್ರಗಳಲ್ಲಿ ಸ್ವಾಲಂಬನೆ ಸಾಧಿಸಬೇಕು ಎಂಬಪ್ರಯತ್ನದ ಭಾಗವಾಗಿ ದೇಶ ರೂಪಿಸುವ ಕಾರ್ಯಕ್ರಮದಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮಹತ್ವದ ಪಾತ್ರ ವಹಿಸಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p>.<p>ಜಲಾಂತರ್ಗಾಮಿ ಆಪ್ಟಿಕಲ್ ಫೈಬರ್ ಕೇಬಲ್ ಮೂಲಕ ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹಕ್ಕೆ ಇಂಟರ್ನೆಟ್ ಸೌಲಭ್ಯಕ್ಕೆ ಚಾಲನೆ ನೀಡುವ ಮುನ್ನಾ ದಿನವಾದ ಭಾನುವಾರ ಅವರು ದ್ವೀಪಗಳ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದರು.</p>.<p>‘ಸಾಗರದ ಮೂಲಕ ನಡೆಯುವ ವ್ಯವಹಾರಕ್ಕೆ ಸಂಬಂಧಿಸಿದಂತೆ ಜಾಗತಿಕ ಮಟ್ಟದಲ್ಲಿ ಪ್ರಮುಖ ಕೇಂದ್ರವಾಗುವ ಸಾಮರ್ಥ್ಯ ಈ ದ್ವೀಪಗಳಿಗಿದೆ. ಹೀಗಾಗಿ ಕಡಲಿಗೆ ಸಂಬಂಧಿಸಿದ ಸ್ವಾರ್ಟ್ಅಪ್ಗಳ ಕೇಂದ್ರವನ್ನಾಗಿ ಈ ದ್ವೀಪಸಮೂಹವನ್ನು ಅಭಿವೃದ್ಧಿಪಡಿಸಲು ಕೇಂದ್ರ ನಿರ್ಧರಿಸಿದೆ’ ಎಂದರು.</p>.<p>‘ಕಡಲ ಆಧಾರಿತ, ಸಾವಯವ ಹಾಗೂ ತೆಂಗು ಆಧಾರಿತ ಉತ್ಪನ್ನಗಳ ವ್ಯಾಪಾರಕ್ಕೆ ಉತ್ತೇಜನ ನೀಡಲು ಹಲವು ಯೋಜನೆಗಳನ್ನು ಜಾರಿಗೊಳಿಸಲಾಗುತ್ತದೆ’ ಎಂದು ಹೇಳಿದರು.</p>.<p>‘ಪೋರ್ಟ್ಬ್ಲೇರ್ ವಿಮಾನ ನಿಲ್ದಾಣವನ್ನು ವಿಸ್ತರಿಸಲಾಗುತ್ತಿದೆ. ಇದರಿಂದ ವಿಮಾನ ಸಂಪರ್ಕ ಹೆಚ್ಚಲಿದೆ. 300 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯೂ ಶೀಘ್ರದಲ್ಲಿಯೇ ಪೂರ್ಣಗೊಳ್ಳುವುದು. ಈ ಅಂಶಗಳು ಸಹ ಪ್ರದೇಶದ ಅಭಿವೃದ್ದಿ ಸಹಕಾರಿಯಾಗಲಿವೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಎಲ್ಲ ಕ್ಷೇತ್ರಗಳಲ್ಲಿ ಸ್ವಾಲಂಬನೆ ಸಾಧಿಸಬೇಕು ಎಂಬಪ್ರಯತ್ನದ ಭಾಗವಾಗಿ ದೇಶ ರೂಪಿಸುವ ಕಾರ್ಯಕ್ರಮದಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮಹತ್ವದ ಪಾತ್ರ ವಹಿಸಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p>.<p>ಜಲಾಂತರ್ಗಾಮಿ ಆಪ್ಟಿಕಲ್ ಫೈಬರ್ ಕೇಬಲ್ ಮೂಲಕ ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹಕ್ಕೆ ಇಂಟರ್ನೆಟ್ ಸೌಲಭ್ಯಕ್ಕೆ ಚಾಲನೆ ನೀಡುವ ಮುನ್ನಾ ದಿನವಾದ ಭಾನುವಾರ ಅವರು ದ್ವೀಪಗಳ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದರು.</p>.<p>‘ಸಾಗರದ ಮೂಲಕ ನಡೆಯುವ ವ್ಯವಹಾರಕ್ಕೆ ಸಂಬಂಧಿಸಿದಂತೆ ಜಾಗತಿಕ ಮಟ್ಟದಲ್ಲಿ ಪ್ರಮುಖ ಕೇಂದ್ರವಾಗುವ ಸಾಮರ್ಥ್ಯ ಈ ದ್ವೀಪಗಳಿಗಿದೆ. ಹೀಗಾಗಿ ಕಡಲಿಗೆ ಸಂಬಂಧಿಸಿದ ಸ್ವಾರ್ಟ್ಅಪ್ಗಳ ಕೇಂದ್ರವನ್ನಾಗಿ ಈ ದ್ವೀಪಸಮೂಹವನ್ನು ಅಭಿವೃದ್ಧಿಪಡಿಸಲು ಕೇಂದ್ರ ನಿರ್ಧರಿಸಿದೆ’ ಎಂದರು.</p>.<p>‘ಕಡಲ ಆಧಾರಿತ, ಸಾವಯವ ಹಾಗೂ ತೆಂಗು ಆಧಾರಿತ ಉತ್ಪನ್ನಗಳ ವ್ಯಾಪಾರಕ್ಕೆ ಉತ್ತೇಜನ ನೀಡಲು ಹಲವು ಯೋಜನೆಗಳನ್ನು ಜಾರಿಗೊಳಿಸಲಾಗುತ್ತದೆ’ ಎಂದು ಹೇಳಿದರು.</p>.<p>‘ಪೋರ್ಟ್ಬ್ಲೇರ್ ವಿಮಾನ ನಿಲ್ದಾಣವನ್ನು ವಿಸ್ತರಿಸಲಾಗುತ್ತಿದೆ. ಇದರಿಂದ ವಿಮಾನ ಸಂಪರ್ಕ ಹೆಚ್ಚಲಿದೆ. 300 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯೂ ಶೀಘ್ರದಲ್ಲಿಯೇ ಪೂರ್ಣಗೊಳ್ಳುವುದು. ಈ ಅಂಶಗಳು ಸಹ ಪ್ರದೇಶದ ಅಭಿವೃದ್ದಿ ಸಹಕಾರಿಯಾಗಲಿವೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>