ಅಮರಾವತಿ: ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಅವರ ಜಾಮೀನು ರದ್ದುಪಡಿಸಬೇಕು ಎಂದು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿದ್ದ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸಂಸದ ಕನಮುರಿ ರಘರಾಮ ಕೃಷ್ಣಂ ರಾಜು ಅವರನ್ನು ಆಂಧ್ರದ ಸಿಐಡಿ ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ.
ದೇಶದ್ರೋಹ ಪ್ರಕರಣ ದಾಖಲಿಸಿರುವ ಸಿಐಡಿ ಪೊಲೀಸರು ರಘರಾಮ ಕೃಷ್ಣಂ ರಾಜು ಅವರನ್ನು ಬಂಧಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ವೈಎಸ್ಆರ್ ಕಾಂಗ್ರೆಸ್ ಪಕ್ಷದ ವರಿಷ್ಠ ಹಾಗೂ ಮುಖ್ಯಮಂತ್ರಿ ಜಗನ್ಮೋಹನ್ರೆಡ್ಡಿ ವಿರುದ್ಧ ಬಂಡಾಯ ಎದ್ದಿರುವ ರಘರಾಮ ಕೃಷ್ಣಂ ರಾಜು ಅವರು, ಆಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಗನ್ಮೋಹನ್ರೆಡ್ಡಿ ಜಾಮೀನು ಪಡೆದಿದ್ದು ಅವರ ಜಾಮೀನನ್ನು ರದ್ದುಪಡಿಸಬೇಕು ಎಂದು ಸಿಬಿಐ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
Rebel YSRCP MP Raghu Rama Krishna Raju brought to Andhra Pradesh CID office in Guntur last night.
He was arrested from his residence in Hyderabad yesterday in a case under provisions of IPC on the allegations that he acted in a way detrimental to the prestige of the state govt. pic.twitter.com/cfbSpc1TlU
ಮುಖ್ಯಮಂತ್ರಿಗಳು ಜಾಮೀನಿನ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿದ್ದು ಅವರ ಜಾಮೀನನ್ನು ಕೂಡಲೇ ರದ್ದುಪಡಿಸಬೇಕು ಎಂದು ಸಿಬಿಐ ನ್ಯಾಯಾಲಯವನ್ನು ಕೋರಿದ್ದರು. ಈ ಬೆಳವಣಿಗೆಯ ಬೆನ್ನಲೇ ಆಂಧ್ರದ ಸಿಐಡಿ ಪೊಲೀಸರು ರಘರಾಮ ಕೃಷ್ಣಂ ರಾಜು ವಿರುದ್ಧ ದೇಶದ್ರೋಹ ಪ್ರಕರಣದ ಅಡಿಯಲ್ಲಿ ಬಂಧಿಸಿದ್ದಾರೆ.
ರಘರಾಮ ಕೃಷ್ಣಂ ರಾಜು ಅವರು ಕೆಲವು ಸಮುದಾಯಗಳ ವಿರುದ್ಧ ದ್ವೇಷದ ಭಾಷಣ ಮಾಡಿದ್ದಾರೆ ಹಾಗೂ ಆಡಳಿತ ಸರ್ಕಾರದ ವಿರುದ್ಧ ಜನರಲ್ಲಿ ಅಸಮಾಧಾನ ಸೃಷ್ಟಿಸುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ.