<p><strong>ತಿರುಪತಿ (ಪಿಟಿಐ):</strong> ಮಗನ ಶವವನ್ನು ಹೊತ್ತೊಯ್ಯಲು ಆಂಬುಲೆನ್ಸ್ನ ಚಾಲಕರ ಬೇಡಿಕೆಯಂತೆ ₹ 10,000 ಕೊಡಲು ಸಾಧ್ಯವಾಗದೇ ತಂದೆಯೊಬ್ಬರು ಬೈಕ್ನ ಹಿಂಬದಿ ಕುಳಿತು, ತೊಡೆಯ ಮೇಲೆ ಮಗನ ಮೃತದೇಹವನ್ನಿರಿಸಿಕೊಂಡು ತಿರುಪತಿಯಿಂದ 90 ಕಿ.ಮೀ. ದೂರದ ಗ್ರಾಮಕ್ಕೆ ತೆರಳಿದ ಹೃದಯವಿದ್ರಾವಕ ಘಟನೆ ಸೋಮವಾರ ತಡರಾತ್ರಿ ನಡೆದಿದೆ.</p>.<p>ನೆರೆಯ ಅನ್ನಮಯ್ಯ ಜಿಲ್ಲೆಯ ಚಿತ್ವೇಲಿ ಗ್ರಾಮದ ಕೃಷಿಕೂಲಿಕಾರ, ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ 10 ವರ್ಷದ ಮಗನನ್ನು ತಿರುಪತಿಯ ರುಯಾ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಬಾಲಕ ಸೋಮವಾರ ತಡರಾತ್ರಿ ಮೃತಪಟ್ಟಿದ್ದಾನೆ.</p>.<p>ಆಸ್ಪತ್ರೆಯ ಆಂಬುಲೆನ್ಸ್ ಚಾಲಕರ ಬೇಡಿಕೆ ಇಟ್ಟಷ್ಟು ಹಣ ಕೊಡಲು ಸಾಧ್ಯವಾಗದ ಕಾರಣ, ಮೃತ ಬಾಲಕನ ತಂದೆ ತನ್ನ ಸಂಬಂಧಿಕರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಸಂಬಂಧಿಕರು ಗ್ರಾಮದಿಂದ ಬೇರೆ ಆಂಬುಲೆನ್ಸ್ ಕಳುಹಿಸಿದ್ದರು. ಆ ಆಂಬುಲೆನ್ಸ್ ಚಾಲಕನನ್ನು ಥಳಿಸಿದ ರುಯಾ ಆಸ್ಪತ್ರೆ ಆಂಬುಲೆನ್ಸ್ ಚಾಲಕರು, ಗ್ರಾಮದಿಂದ ಬಂದಿದ್ದ ಆಂಬುಲೆನ್ಸ್ ಜಾಗ ಖಾಲಿ ಮಾಡುವಂತೆಯೂ ಮಾಡಿದ್ದಾರೆ.</p>.<p>ಆಗ ಬೇರೆ ದಾರಿ ಕಾಣದೇ, ಸಂಬಂಧಿಯೊಬ್ಬರ ಬೈಕ್ನಲ್ಲಿ ಮಗನ ಶವವನ್ನು ತೊಡೆಯ ಮೇಲಿರಿಸಿಕೊಂಡು ಬೈಕ್ನ ಹಿಂಬದಿ ಕುಳಿತು ಆ ಕೃಷಿ ಕೂಲಿಕಾರ ಗ್ರಾಮಕ್ಕೆ ತೆರಳಿದ್ದಾರೆ.</p>.<p>ಈ ಘಟನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ರುಯಾ ಆಸ್ಪತ್ರೆಯ ಹಿರಿಯ ಸ್ಥಾನಿಕ ವೈದ್ಯಕೀಯ ಅಧಿಕಾರಿಯನ್ನು ಅಮಾನತುಗೊಳಿಸಿರುವ ರಾಜ್ಯ ಸರ್ಕಾರ, ಆಸ್ಪತ್ರೆಯ ಸೂಪರಿಂಟೆಂಡೆಂಟ್ಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.</p>.<p>ಆಸ್ಪತ್ರೆಯ ಆಂಬುಲೆನ್ಸ್ ಚಾಲಕರನ್ನು ಪತ್ತೆ ಹಚ್ಚಿ, ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆಯೂ ಸೂಚಿಸಿದೆ.</p>.<p>‘ಈ ಘಟನೆಯಲ್ಲಿ ಆಸ್ಪತ್ರೆ ಸಿಬ್ಬಂದಿ ಅಥವಾ ಖಾಸಗಿ ವ್ಯಕ್ತಿಗಳ ಪಾತ್ರ ಇದೆಯೇ ಎಂಬ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ<br />ಜರುಗಿಸಲಾಗುವುದು. ಯಾರನ್ನೂ ರಕ್ಷಿಸುವ ಮಾತೇ ಇಲ್ಲ’ ಎಂದು ಆರೋಗ್ಯ ಸಚಿವೆ ವಿ.ರಜಿನಿ ಪ್ರತಿಕ್ರಿಯಿಸಿದ್ದಾರೆ.</p>.<p>ಘಟನೆ ಕುರಿತು ವಿಚಾರಣೆ ನಡೆಸುವ ಸಂಬಂಧ ತಿರುಪತಿ ಜಿಲ್ಲಾಧಿಕಾರಿ ವೆಂಕಟರಮಣ ರೆಡ್ಡಿ ಅವರು ಮೂವರು ಸದಸ್ಯರನ್ನು ಒಳಗೊಂಡ ಸಮಿತಿಯನ್ನು ರಚಿಸಿದ್ದಾರೆ. ‘ರುಯಾ ಆಸ್ಪತ್ರೆಯ ಆಂಬುಲೆನ್ಸ್ ಚಾಲಕರು ದೌರ್ಜನ್ಯ ನಡೆಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಘಟನೆಗೆ ಕಾರಣರು ಎನ್ನಲಾದ ನಾಲ್ವರು ಚಾಲಕರನ್ನು ಗುರುತಿಸಲಾಗಿದೆ’ ಎಂದು ಈ ತ್ರಿಸದಸ್ಯ ಸಮಿತಿ ಹೇಳಿದೆ.</p>.<p class="Subhead">ಟೀಕೆ–ಪ್ರತಿಭಟನೆ: ‘ಈ ಘಟನೆ ರಾಜ್ಯದ ಆರೋಗ್ಯ ಕ್ಷೇತ್ರದ ದುಃಸ್ಥಿತಿಗೆ ಹಿಡಿದ ಕನ್ನಡಿ’ ಎಂದು ಟಿಡಿಪಿ ಮುಖ್ಯಸ್ಥ ಹಾಗೂ ವಿರೋಧ ಪಕ್ಷದ ನಾಯಕ ಎನ್.ಚಂದ್ರಬಾಬು ನಾಯ್ಡು ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುಪತಿ (ಪಿಟಿಐ):</strong> ಮಗನ ಶವವನ್ನು ಹೊತ್ತೊಯ್ಯಲು ಆಂಬುಲೆನ್ಸ್ನ ಚಾಲಕರ ಬೇಡಿಕೆಯಂತೆ ₹ 10,000 ಕೊಡಲು ಸಾಧ್ಯವಾಗದೇ ತಂದೆಯೊಬ್ಬರು ಬೈಕ್ನ ಹಿಂಬದಿ ಕುಳಿತು, ತೊಡೆಯ ಮೇಲೆ ಮಗನ ಮೃತದೇಹವನ್ನಿರಿಸಿಕೊಂಡು ತಿರುಪತಿಯಿಂದ 90 ಕಿ.ಮೀ. ದೂರದ ಗ್ರಾಮಕ್ಕೆ ತೆರಳಿದ ಹೃದಯವಿದ್ರಾವಕ ಘಟನೆ ಸೋಮವಾರ ತಡರಾತ್ರಿ ನಡೆದಿದೆ.</p>.<p>ನೆರೆಯ ಅನ್ನಮಯ್ಯ ಜಿಲ್ಲೆಯ ಚಿತ್ವೇಲಿ ಗ್ರಾಮದ ಕೃಷಿಕೂಲಿಕಾರ, ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ 10 ವರ್ಷದ ಮಗನನ್ನು ತಿರುಪತಿಯ ರುಯಾ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಬಾಲಕ ಸೋಮವಾರ ತಡರಾತ್ರಿ ಮೃತಪಟ್ಟಿದ್ದಾನೆ.</p>.<p>ಆಸ್ಪತ್ರೆಯ ಆಂಬುಲೆನ್ಸ್ ಚಾಲಕರ ಬೇಡಿಕೆ ಇಟ್ಟಷ್ಟು ಹಣ ಕೊಡಲು ಸಾಧ್ಯವಾಗದ ಕಾರಣ, ಮೃತ ಬಾಲಕನ ತಂದೆ ತನ್ನ ಸಂಬಂಧಿಕರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಸಂಬಂಧಿಕರು ಗ್ರಾಮದಿಂದ ಬೇರೆ ಆಂಬುಲೆನ್ಸ್ ಕಳುಹಿಸಿದ್ದರು. ಆ ಆಂಬುಲೆನ್ಸ್ ಚಾಲಕನನ್ನು ಥಳಿಸಿದ ರುಯಾ ಆಸ್ಪತ್ರೆ ಆಂಬುಲೆನ್ಸ್ ಚಾಲಕರು, ಗ್ರಾಮದಿಂದ ಬಂದಿದ್ದ ಆಂಬುಲೆನ್ಸ್ ಜಾಗ ಖಾಲಿ ಮಾಡುವಂತೆಯೂ ಮಾಡಿದ್ದಾರೆ.</p>.<p>ಆಗ ಬೇರೆ ದಾರಿ ಕಾಣದೇ, ಸಂಬಂಧಿಯೊಬ್ಬರ ಬೈಕ್ನಲ್ಲಿ ಮಗನ ಶವವನ್ನು ತೊಡೆಯ ಮೇಲಿರಿಸಿಕೊಂಡು ಬೈಕ್ನ ಹಿಂಬದಿ ಕುಳಿತು ಆ ಕೃಷಿ ಕೂಲಿಕಾರ ಗ್ರಾಮಕ್ಕೆ ತೆರಳಿದ್ದಾರೆ.</p>.<p>ಈ ಘಟನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ರುಯಾ ಆಸ್ಪತ್ರೆಯ ಹಿರಿಯ ಸ್ಥಾನಿಕ ವೈದ್ಯಕೀಯ ಅಧಿಕಾರಿಯನ್ನು ಅಮಾನತುಗೊಳಿಸಿರುವ ರಾಜ್ಯ ಸರ್ಕಾರ, ಆಸ್ಪತ್ರೆಯ ಸೂಪರಿಂಟೆಂಡೆಂಟ್ಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.</p>.<p>ಆಸ್ಪತ್ರೆಯ ಆಂಬುಲೆನ್ಸ್ ಚಾಲಕರನ್ನು ಪತ್ತೆ ಹಚ್ಚಿ, ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆಯೂ ಸೂಚಿಸಿದೆ.</p>.<p>‘ಈ ಘಟನೆಯಲ್ಲಿ ಆಸ್ಪತ್ರೆ ಸಿಬ್ಬಂದಿ ಅಥವಾ ಖಾಸಗಿ ವ್ಯಕ್ತಿಗಳ ಪಾತ್ರ ಇದೆಯೇ ಎಂಬ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ<br />ಜರುಗಿಸಲಾಗುವುದು. ಯಾರನ್ನೂ ರಕ್ಷಿಸುವ ಮಾತೇ ಇಲ್ಲ’ ಎಂದು ಆರೋಗ್ಯ ಸಚಿವೆ ವಿ.ರಜಿನಿ ಪ್ರತಿಕ್ರಿಯಿಸಿದ್ದಾರೆ.</p>.<p>ಘಟನೆ ಕುರಿತು ವಿಚಾರಣೆ ನಡೆಸುವ ಸಂಬಂಧ ತಿರುಪತಿ ಜಿಲ್ಲಾಧಿಕಾರಿ ವೆಂಕಟರಮಣ ರೆಡ್ಡಿ ಅವರು ಮೂವರು ಸದಸ್ಯರನ್ನು ಒಳಗೊಂಡ ಸಮಿತಿಯನ್ನು ರಚಿಸಿದ್ದಾರೆ. ‘ರುಯಾ ಆಸ್ಪತ್ರೆಯ ಆಂಬುಲೆನ್ಸ್ ಚಾಲಕರು ದೌರ್ಜನ್ಯ ನಡೆಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಘಟನೆಗೆ ಕಾರಣರು ಎನ್ನಲಾದ ನಾಲ್ವರು ಚಾಲಕರನ್ನು ಗುರುತಿಸಲಾಗಿದೆ’ ಎಂದು ಈ ತ್ರಿಸದಸ್ಯ ಸಮಿತಿ ಹೇಳಿದೆ.</p>.<p class="Subhead">ಟೀಕೆ–ಪ್ರತಿಭಟನೆ: ‘ಈ ಘಟನೆ ರಾಜ್ಯದ ಆರೋಗ್ಯ ಕ್ಷೇತ್ರದ ದುಃಸ್ಥಿತಿಗೆ ಹಿಡಿದ ಕನ್ನಡಿ’ ಎಂದು ಟಿಡಿಪಿ ಮುಖ್ಯಸ್ಥ ಹಾಗೂ ವಿರೋಧ ಪಕ್ಷದ ನಾಯಕ ಎನ್.ಚಂದ್ರಬಾಬು ನಾಯ್ಡು ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>