ಮಂಗಳವಾರ ವಿಶಾಖಪಟ್ಟಣದ ಮಂಗಳಗಿರಿ ಸಮೀಪದಲ್ಲಿರುವ ಟಿಡಿಪಿ ಕೇಂದ್ರ ಕಚೇರಿ ಮತ್ತು ಇತರ ಸ್ಥಳಗಳಲ್ಲಿರುವ ಪಕ್ಷಗಳ ಕಚೇರಿ ಮೇಲೆ ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ಪಕ್ಷದ ವಕ್ತಾರ ಕೆ. ಪಟ್ಟಾಭಿ ರಾಮ್ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದರು. ಇದೇ ವೇಳೆ ಮುಖ್ಯಮಂತ್ರಿ ವೈ.ಎಸ್. ಜಗನ್ಮೋಹನ್ ರೆಡ್ಡಿ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿ ಟೀಕಿಸಿದ್ದರು.