<p class="title"><strong>ಹೈದರಾಬಾದ್: </strong>ತಿರುಮಲ ತಿರುಪತಿ ದೇವಸ್ಥಾನ ಮಂಡಳಿಗೆ 52 ವಿಶೇಷ ಆಹ್ವಾನಿತ ಸದಸ್ಯರ ನೇಮಕ ಸೇರಿದಂತೆ ವೈಎಸ್ಆರ್ಸಿಪಿ ಸರ್ಕಾರದ ಎರಡು ವಿವಾದಾತ್ಮಕ ನೇಮಕಾತಿಯ ಆದೇಶಗಳಿಗೆ ಬುಧವಾರ ಆಂಧ್ರಪ್ರದೇಶ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.</p>.<p class="title">ಪ್ರಸಿದ್ಧ ವೆಂಕಟೇಶ್ವರ ದೇವಸ್ಥಾನದ ನಿರ್ವಹಣೆಗಾಗಿ ಅಧ್ಯಕ್ಷ, 52 ವಿಶೇಷ ಆಹ್ವಾನಿತರು ಸೇರಿದಂತೆ ಒಟ್ಟು 81 ಸದಸ್ಯರ ನೇಮಕಕ್ಕೆ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಟಿಡಿಪಿ ವಿರೋಧ ವ್ಯಕ್ತಪಡಿಸಿವೆ.</p>.<p class="title">‘ಆಂಧ್ರಪ್ರದೇಶ ಚಾರಿಟೇಬಲ್ ಮತ್ತು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ಕಾಯ್ದೆ 1987ರ ನಿಯಮ ಉಲ್ಲಂಘಿಸಿ, ಜಗನ್ಮೋಹನ್ ರೆಡ್ಡಿ ನೇತೃತ್ವದ ಸರ್ಕಾರವು ನೇಮಕಾತಿ ನಡೆಸಿದೆ’ ಎಂದು ಆರೋಪಿಸಿ ಬಿಜೆಪಿ, ಟಿಡಿಪಿ ನಾಯಕರು ಸೇರಿದಂತೆ ಹಲವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದಾರೆ.</p>.<p class="title">ಅರ್ಜಿಯ ವಿಚಾರಣೆ ನಡೆಸಿದ ಆಂಧ್ರಪ್ರದೇಶ ಹೈಕೋರ್ಟ್ನ ವಿಭಾಗೀಯ ನ್ಯಾಯಪೀಠವು, ಕಳೆದ ವಾರ ಸರ್ಕಾರ ಹೊರಡಿಸಿದ್ದ ಆದೇಶದ ಅನುಷ್ಠಾನಕ್ಕೆ ತಡೆಯೊಡ್ಡಿ ಮಧ್ಯಂತರ ಆದೇಶ ನೀಡಿದೆ. ಈ ಸಂಬಂಧ ರಾಜ್ಯ ಸರ್ಕಾರ ಮತ್ತು ಟಿಟಿಡಿಗೆ ನೋಟಿಸ್ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಹೈದರಾಬಾದ್: </strong>ತಿರುಮಲ ತಿರುಪತಿ ದೇವಸ್ಥಾನ ಮಂಡಳಿಗೆ 52 ವಿಶೇಷ ಆಹ್ವಾನಿತ ಸದಸ್ಯರ ನೇಮಕ ಸೇರಿದಂತೆ ವೈಎಸ್ಆರ್ಸಿಪಿ ಸರ್ಕಾರದ ಎರಡು ವಿವಾದಾತ್ಮಕ ನೇಮಕಾತಿಯ ಆದೇಶಗಳಿಗೆ ಬುಧವಾರ ಆಂಧ್ರಪ್ರದೇಶ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.</p>.<p class="title">ಪ್ರಸಿದ್ಧ ವೆಂಕಟೇಶ್ವರ ದೇವಸ್ಥಾನದ ನಿರ್ವಹಣೆಗಾಗಿ ಅಧ್ಯಕ್ಷ, 52 ವಿಶೇಷ ಆಹ್ವಾನಿತರು ಸೇರಿದಂತೆ ಒಟ್ಟು 81 ಸದಸ್ಯರ ನೇಮಕಕ್ಕೆ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಟಿಡಿಪಿ ವಿರೋಧ ವ್ಯಕ್ತಪಡಿಸಿವೆ.</p>.<p class="title">‘ಆಂಧ್ರಪ್ರದೇಶ ಚಾರಿಟೇಬಲ್ ಮತ್ತು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ಕಾಯ್ದೆ 1987ರ ನಿಯಮ ಉಲ್ಲಂಘಿಸಿ, ಜಗನ್ಮೋಹನ್ ರೆಡ್ಡಿ ನೇತೃತ್ವದ ಸರ್ಕಾರವು ನೇಮಕಾತಿ ನಡೆಸಿದೆ’ ಎಂದು ಆರೋಪಿಸಿ ಬಿಜೆಪಿ, ಟಿಡಿಪಿ ನಾಯಕರು ಸೇರಿದಂತೆ ಹಲವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದಾರೆ.</p>.<p class="title">ಅರ್ಜಿಯ ವಿಚಾರಣೆ ನಡೆಸಿದ ಆಂಧ್ರಪ್ರದೇಶ ಹೈಕೋರ್ಟ್ನ ವಿಭಾಗೀಯ ನ್ಯಾಯಪೀಠವು, ಕಳೆದ ವಾರ ಸರ್ಕಾರ ಹೊರಡಿಸಿದ್ದ ಆದೇಶದ ಅನುಷ್ಠಾನಕ್ಕೆ ತಡೆಯೊಡ್ಡಿ ಮಧ್ಯಂತರ ಆದೇಶ ನೀಡಿದೆ. ಈ ಸಂಬಂಧ ರಾಜ್ಯ ಸರ್ಕಾರ ಮತ್ತು ಟಿಟಿಡಿಗೆ ನೋಟಿಸ್ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>