<p><strong>ಹೈದರಾಬಾದ್:</strong> ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ ರೆಡ್ಡಿ ಅವರ ಸ್ಮರಣಾರ್ಥ, ಅವರ ಪತ್ನಿ ವೈ.ಎಸ್.ವಿಜಯಮ್ಮ ಅವರು ಗುರುವಾರ ಇಲ್ಲಿ ಏರ್ಪಡಿಸಿದ್ದ ಸಭೆಗೆ ಅವರ ಪುತ್ರ, ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಗೈರಾಗಿದ್ದರು.</p>.<p>ಹೈದರಾಬಾದಿನಲ್ಲಿ ನಡೆದ 12ನೇ ವಾರ್ಷಿಕೋತ್ಸವ ಸಭೆಗೆ ಜಗನ್ ಹಾಜರಾಗದಿರುವುದು ಮತ್ತು ಎಡುಪುಲಪಾಯದಲ್ಲಿ ನಡೆದ ಕಾರ್ಯಕ್ರಮಗಳನ್ನು ಗಮನಿಸಿದರೆ ವೈಎಸ್ಆರ್ ಕುಟುಂಬದಲ್ಲಿ ಬಿರುಕು ಮೂಡಿರಬಹುದು ಎಂದು ರಾಜಕೀಯ ವಿಶ್ಲೇಷಕರು ಸಂಶಯ ಪಟ್ಟಿದ್ದಾರೆ.</p>.<p>ಜಗನ್ ಅವರ ಸಹೋದರಿ ವೈ.ಎಸ್.ಶರ್ಮಿಳಾ ಅವರು ತೆಲಂಗಾಣ ರಾಜಕೀಯಕ್ಕೆ ಧುಮುಕಿದ್ದರಿಂದ ಈ ಬಿರುಕು ಮೂಡಿದೆ ಎಂಬುದು ಅವರ ವಿಶ್ಲೇಷಣೆ.</p>.<p>ಜಗನ್ ಅವರು ತನ್ನ ರಾಜಕೀಯ ಚಟುವಟಿಕೆಯನ್ನು ಆಂಧ್ರ ಪ್ರದೇಶಕ್ಕೆ ಸೀಮಿತಗೊಳಿಸಿಕೊಂಡಿದ್ದಾರೆ. ಅವರ ಸಹೋದರಿ ಶರ್ಮಿಳಾ ಅವರು ಸಹೋದರನ ಅಸಮ್ಮತಿಯ ಹೊರತಾಗಿಯೂ ತೆಲಂಗಾಣ ರಾಜಕೀಯ ಪ್ರವೇಶಿಸಿದ್ದಾರೆ.</p>.<p>ಹೈದರಾಬಾದ್ ಸ್ಟಾರ್ ಹೋಟೆಲ್ನಲ್ಲಿ ಸಂಜೆ ನಡೆದ ಕೂಟದಲ್ಲಿ ವೈಎಸ್ಆರ್ ನಿಷ್ಠರು, ರಾಜಕಾರಣಿಗಳು, ಕೈಗಾರಿಕೋದ್ಯಮಿಗಳು, ಮಾಜಿ ಅಧಿಕಾರಿಗಳು ಭಾಗವಹಿಸಿದ್ದರು. ರಾಜಕೀಯವಾಗಿ ಶರ್ಮಿಳಾ ಅವರ ಕೈಬಲಪಡಿಸುವ ನಿಟ್ಟಿನಲ್ಲಿ ಈ ಸಭೆ ನಡೆದಿದೆ ಎಂದು ಹೇಳಲಾಗುತ್ತಿದೆ.</p>.<p>ಜುಲೈ 8ರಂದು ವೈಎಸ್ಆರ್ ಜನ್ಮ ದಿನಾಚರಣೆಯಂದು ಶರ್ಮಿಳಾ ಅವರು ವೈಎಸ್ಆರ್ ತೆಲಂಗಾಣ ಪಕ್ಷವನ್ನು (ವೈಎಸ್ಆರ್ಟಿಪಿ) ಘೋಷಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ ರೆಡ್ಡಿ ಅವರ ಸ್ಮರಣಾರ್ಥ, ಅವರ ಪತ್ನಿ ವೈ.ಎಸ್.ವಿಜಯಮ್ಮ ಅವರು ಗುರುವಾರ ಇಲ್ಲಿ ಏರ್ಪಡಿಸಿದ್ದ ಸಭೆಗೆ ಅವರ ಪುತ್ರ, ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಗೈರಾಗಿದ್ದರು.</p>.<p>ಹೈದರಾಬಾದಿನಲ್ಲಿ ನಡೆದ 12ನೇ ವಾರ್ಷಿಕೋತ್ಸವ ಸಭೆಗೆ ಜಗನ್ ಹಾಜರಾಗದಿರುವುದು ಮತ್ತು ಎಡುಪುಲಪಾಯದಲ್ಲಿ ನಡೆದ ಕಾರ್ಯಕ್ರಮಗಳನ್ನು ಗಮನಿಸಿದರೆ ವೈಎಸ್ಆರ್ ಕುಟುಂಬದಲ್ಲಿ ಬಿರುಕು ಮೂಡಿರಬಹುದು ಎಂದು ರಾಜಕೀಯ ವಿಶ್ಲೇಷಕರು ಸಂಶಯ ಪಟ್ಟಿದ್ದಾರೆ.</p>.<p>ಜಗನ್ ಅವರ ಸಹೋದರಿ ವೈ.ಎಸ್.ಶರ್ಮಿಳಾ ಅವರು ತೆಲಂಗಾಣ ರಾಜಕೀಯಕ್ಕೆ ಧುಮುಕಿದ್ದರಿಂದ ಈ ಬಿರುಕು ಮೂಡಿದೆ ಎಂಬುದು ಅವರ ವಿಶ್ಲೇಷಣೆ.</p>.<p>ಜಗನ್ ಅವರು ತನ್ನ ರಾಜಕೀಯ ಚಟುವಟಿಕೆಯನ್ನು ಆಂಧ್ರ ಪ್ರದೇಶಕ್ಕೆ ಸೀಮಿತಗೊಳಿಸಿಕೊಂಡಿದ್ದಾರೆ. ಅವರ ಸಹೋದರಿ ಶರ್ಮಿಳಾ ಅವರು ಸಹೋದರನ ಅಸಮ್ಮತಿಯ ಹೊರತಾಗಿಯೂ ತೆಲಂಗಾಣ ರಾಜಕೀಯ ಪ್ರವೇಶಿಸಿದ್ದಾರೆ.</p>.<p>ಹೈದರಾಬಾದ್ ಸ್ಟಾರ್ ಹೋಟೆಲ್ನಲ್ಲಿ ಸಂಜೆ ನಡೆದ ಕೂಟದಲ್ಲಿ ವೈಎಸ್ಆರ್ ನಿಷ್ಠರು, ರಾಜಕಾರಣಿಗಳು, ಕೈಗಾರಿಕೋದ್ಯಮಿಗಳು, ಮಾಜಿ ಅಧಿಕಾರಿಗಳು ಭಾಗವಹಿಸಿದ್ದರು. ರಾಜಕೀಯವಾಗಿ ಶರ್ಮಿಳಾ ಅವರ ಕೈಬಲಪಡಿಸುವ ನಿಟ್ಟಿನಲ್ಲಿ ಈ ಸಭೆ ನಡೆದಿದೆ ಎಂದು ಹೇಳಲಾಗುತ್ತಿದೆ.</p>.<p>ಜುಲೈ 8ರಂದು ವೈಎಸ್ಆರ್ ಜನ್ಮ ದಿನಾಚರಣೆಯಂದು ಶರ್ಮಿಳಾ ಅವರು ವೈಎಸ್ಆರ್ ತೆಲಂಗಾಣ ಪಕ್ಷವನ್ನು (ವೈಎಸ್ಆರ್ಟಿಪಿ) ಘೋಷಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>