ಬುಧವಾರ, ಮಾರ್ಚ್ 29, 2023
30 °C

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮೂರನೇ ಬಾರಿ ಇ.ಡಿ ವಿಚಾರಣೆಗೆ ಗೈರಾದ ದೇಶಮುಖ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ತಮ್ಮ ವಿರುದ್ಧ ನಡೆಸುತ್ತಿರುವ ವಿಚಾರಣೆ ಪಾರದರ್ಶಕವಾಗಿಲ್ಲ ಎಂದು ಆರೋಪಿಸಿರುವ ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್ ಅವರು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದಾರೆ.

ಅಲ್ಲದೆ ‘ತನಿಖೆ ಪಾರದರ್ಶಕವಾಗಿಲ್ಲ‘ ಎಂದು ಆರೋಪಿಸಿ ಇ.ಡಿ ವಿಚಾರಣೆಗೆ ಮತ್ತೆ ಗೈರು ಹಾಜರಾಗಿರುವ ದೇಶಮುಖ್ ಅವರು, ಮುಂಬೈನ ಜಾರಿ ನಿರ್ದೇಶನಾಲಯದ ಸಹಾಯಕ ನಿರ್ದೇಶಕ ಟಸ್ಸೈನ್ ಸುಲ್ತಾನ್ ಅವರಿಗೆ ಎಂಟು ಪುಟಗಳ ಪತ್ರ ಬರೆದಿದ್ದಾರೆ.

ಪತ್ರದಲ್ಲಿ, ‘ನಾನು ನನ್ನ ಸಂಪೂರ್ಣ ಜೀವನವನ್ನು ಸಾರ್ವಜನಿಕ ಸೇವೆಗಾಗಿ ಮೀಸಲಿಟ್ಟಿದ್ದೇನೆ ಮತ್ತು ಈಗ ನಡೆಯುತ್ತಿರುವ ತನಿಖೆಗೆ ಅಗತ್ಯ ನೆರವು ನೀಡಲು ಹಿಂಜರಿಯುವುದಿಲ್ಲ‘ ಎಂದು ಬರೆದಿದ್ದಾರೆ.

‘ತನಿಖೆಯು ಪಾರದರ್ಶಕ ಮತ್ತು ನಿಷ್ಪಕ್ಷಪಾತವಾಗಿಲ್ಲ ಎಂಬುದು ನನ್ನಲ್ಲಿ ಆತಂಕ ಮೂಡಿಸಿದೆ‘ ಎಂದೂ ಉಲ್ಲೇಖಿಸಿದ್ದಾರೆ. ‘ಕಾನೂನಿನ ಪ್ರಕ್ರಿಯೆಯ ದಾರಿ ತಪ್ಪಿಸುವ ಮೂಲಕ ತನ್ನ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟು ಮಾಡಲಾಗುತ್ತಿದೆ‘ ಎಂದು ಬರೆದಿದ್ದಾರೆ.

ಮುಂಬೈನ ಮಾಜಿ ಪೊಲೀಸ್ ಆಯುಕ್ತ, ಹಾಲಿ ಗೃಹ ರಕ್ಷಕ ದಳದ ಪ್ರಧಾನ ಕಮಾಂಡಂಟ್ ಪರಮ್‌ ಬೀರ್ ಸಿಂಗ್ ಅವರು ಮಾಜಿ ಸಚಿವ ಅನಿಲ್ ದೇಶಮುಖ್ ವಿರುದ್ಧ ₹100 ಕೋಟಿ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಜಾರಿ ನಿರ್ದೇಶನಾಲಯ ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದು ಅನಿಲ್‌ ದೇಶಮುಖ್ ಅವರಿಗೆ ಮೂರನೇ ಬಾರಿ ಸಮನ್ಸ್‌ ನೀಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು