ದೇಶಮುಖ್ ಅವರ ವೈಯಕ್ತಿಕ ಕಾರ್ಯದರ್ಶಿ ಸಂಜೀವ್ ಪಾಲಂಡೆ ಮತ್ತು ವೈಯಕ್ತಿಕ ಸಹಾಯಕ ಕುಂದನ್ ಶಿಂಧೆ ಅವರ ವಿಚಾರಣೆಯ ವೇಳೆ ಇಡಿ ಈ ಹೇಳಿಕೆ ನೀಡಿದೆ. ಏಪ್ರಿಲ್ನಲ್ಲಿ ದೇಶಮುಖ್ ರಾಜೀನಾಮೆ ನೀಡಲು ಕಾರಣವಾದ ಬಹುಕೋಟಿ ಲಂಚ ಮತ್ತು ಸುಲಿಗೆ ದಂಧೆಗೆ ಸಂಬಂಧಿಸಿದ ಹಣ ವರ್ಗಾವಣೆ ಆರೋಪದ ಮೇಲೆ ಪಿಎಂಎಲ್ಎ ಕಾಯ್ದೆಯಡಿ ಪಾಲಂಡೆ ಮತ್ತು ಶಿಂಧೆ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜುಲೈ 1ರವರೆಗೆ ಇವರಿಬ್ಬರನ್ನು ಇಡಿ ಕಸ್ಟಡಿಗೆ ನೀಡಲಾಗಿದೆ. ದೇಶಮುಖ್ ಅವರನ್ನು ಇಂದು ಬೆಳಿಗ್ಗೆ 11 ಗಂಟೆಯ ಹೊತ್ತಿಗೆ ಬಲ್ಲಾರ್ಡ್ ಎಸ್ಟೇಟ್ನ ಇಡಿ ಕಚೇರಿಯಲ್ಲಿ ತನಿಖಾ ಅಧಿಕಾರಿಯ ಮುಂದೆ ಹಾಜರಾಗಲು ತಿಳಿಸಲಾಗಿತ್ತು. ಆದರೆ, ಅಧಿಕಾರಿಗಳ ಮುಂದೆ ಹಾಜರಾಗಲು ಹೊಸ ದಿನಾಂಕ ಕೋರಿ ದೇಶಮುಖ್ ಪರ ವಕೀಲರ ತಂಡವು ಇಡಿಗೆ ಮನವಿ ಸಲ್ಲಿಸಿದೆ.