ಭ್ರಷ್ಟಾಚಾರ ಆರೋಪದಿಂದ ಬೇಸರಗೊಂಡಂತಿರುವ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಸೋಮವಾರ ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಭಾನುವಾರ ಹೇಳಿದ್ದರು. ಆದರೆ ರಾತ್ರಿ ಪಕ್ಷದ ರಾಜ್ಯ ವರಿಷ್ಠ ಜಯಂತ್ ಪಾಟೀಲ್ ಹೇಳಿಕೆ ನೀಡಿ, ಉದ್ಯಮಿ ಮನ್ಸುಖ್ ಹಿರೇನ್ ನಿಗೂಢ ಸಾವು ಮತ್ತು ಉದ್ಯಮಿ ಮುಕೇಶ್ ಅಂಬಾನಿ ಮನೆಯ ಬಳಿ ಸ್ಫೋಟಕ ಪತ್ತೆ ಪ್ರಕರಣದಿಂದ ಗಮನ ಬೇರೆಡೆಗೆ ಸೆಳೆಯಲು ಈ ತಂತ್ರ ಹೂಡಲಾಗಿದೆ ಎಂದು ಆರೋಪಿಸಿದರು.