<p><strong>ನವದೆಹಲಿ:</strong> ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶಮುಖ್ ಅವರ ರಾಜೀನಾಮೆ ಸಾಧ್ಯತೆಯ ಬಗ್ಗೆ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಸುಳಿವು ನೀಡಿದ ಗಂಟೆಯೊಳಗೆ ಪಕ್ಷವು ತನ್ನ ನಿಲುವು ಬದಲಿಸಿದ್ದು, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದೆ.</p>.<p>ಭ್ರಷ್ಟಾಚಾರ ಆರೋಪದಿಂದ ಬೇಸರಗೊಂಡಂತಿರುವ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಸೋಮವಾರ ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಭಾನುವಾರ ಹೇಳಿದ್ದರು. ಆದರೆ ರಾತ್ರಿ ಪಕ್ಷದ ರಾಜ್ಯ ವರಿಷ್ಠ ಜಯಂತ್ ಪಾಟೀಲ್ ಹೇಳಿಕೆ ನೀಡಿ, ಉದ್ಯಮಿ ಮನ್ಸುಖ್ ಹಿರೇನ್ ನಿಗೂಢ ಸಾವು ಮತ್ತು ಉದ್ಯಮಿ ಮುಕೇಶ್ ಅಂಬಾನಿ ಮನೆಯ ಬಳಿ ಸ್ಫೋಟಕ ಪತ್ತೆ ಪ್ರಕರಣದಿಂದ ಗಮನ ಬೇರೆಡೆಗೆ ಸೆಳೆಯಲು ಈ ತಂತ್ರ ಹೂಡಲಾಗಿದೆ ಎಂದು ಆರೋಪಿಸಿದರು.</p>.<p><strong>ಓದಿ:</strong><a href="https://www.prajavani.net/india-news/sharad-pawar-says-mumbai-police-chief-param-bir-singh-claims-serious-need-thorough-probe-815250.html" itemprop="url">ಅನಿಲ್ ದೇಶಮುಖ್ ವಿರುದ್ಧ ಪರಮ್ ಬೀರ್ ಸಿಂಗ್ ಆರೋಪಗಳು ಗಂಭೀರ: ಶರದ್ ಪವಾರ್</a></p>.<p>ಮುಂಬೈಯ ಮಾಜಿ ಪೊಲೀಸ್ ಆಯುಕ್ತರ ಹೇಳಿಕೆಯನ್ನೇ ಮುಂದಿಟ್ಟುಕೊಂಡು ಬಿಜೆಪಿ ನಾಯಕ ದೇವೇಂದ್ರ ಫಡಣವೀಸ್, ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಒತ್ತಡ ಹಾಕುತ್ತಿದ್ದಂತೆ ಎನ್ಸಿಪಿ ಪಾಳಯದಲ್ಲೂ ಬಿರುಸಿನ ಚರ್ಚೆ ನಡೆದಿತ್ತು.</p>.<p><strong>ಓದಿ:</strong><a href="https://www.prajavani.net/india-news/param-birs-letter-waze-case-tainted-mvas-image-allies-need-to-introspect-raut-815233.html" itemprop="url">ಮಹಾರಾಷ್ಟ್ರ ಗೃಹ ಸಚಿವರ ವಿರುದ್ಧ ಆರೋಪ: ಎಂವಿಎ ಸರ್ಕಾರದ ವರ್ಚಸ್ಸಿಗೆ ಧಕ್ಕೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶಮುಖ್ ಅವರ ರಾಜೀನಾಮೆ ಸಾಧ್ಯತೆಯ ಬಗ್ಗೆ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಸುಳಿವು ನೀಡಿದ ಗಂಟೆಯೊಳಗೆ ಪಕ್ಷವು ತನ್ನ ನಿಲುವು ಬದಲಿಸಿದ್ದು, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದೆ.</p>.<p>ಭ್ರಷ್ಟಾಚಾರ ಆರೋಪದಿಂದ ಬೇಸರಗೊಂಡಂತಿರುವ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಸೋಮವಾರ ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಭಾನುವಾರ ಹೇಳಿದ್ದರು. ಆದರೆ ರಾತ್ರಿ ಪಕ್ಷದ ರಾಜ್ಯ ವರಿಷ್ಠ ಜಯಂತ್ ಪಾಟೀಲ್ ಹೇಳಿಕೆ ನೀಡಿ, ಉದ್ಯಮಿ ಮನ್ಸುಖ್ ಹಿರೇನ್ ನಿಗೂಢ ಸಾವು ಮತ್ತು ಉದ್ಯಮಿ ಮುಕೇಶ್ ಅಂಬಾನಿ ಮನೆಯ ಬಳಿ ಸ್ಫೋಟಕ ಪತ್ತೆ ಪ್ರಕರಣದಿಂದ ಗಮನ ಬೇರೆಡೆಗೆ ಸೆಳೆಯಲು ಈ ತಂತ್ರ ಹೂಡಲಾಗಿದೆ ಎಂದು ಆರೋಪಿಸಿದರು.</p>.<p><strong>ಓದಿ:</strong><a href="https://www.prajavani.net/india-news/sharad-pawar-says-mumbai-police-chief-param-bir-singh-claims-serious-need-thorough-probe-815250.html" itemprop="url">ಅನಿಲ್ ದೇಶಮುಖ್ ವಿರುದ್ಧ ಪರಮ್ ಬೀರ್ ಸಿಂಗ್ ಆರೋಪಗಳು ಗಂಭೀರ: ಶರದ್ ಪವಾರ್</a></p>.<p>ಮುಂಬೈಯ ಮಾಜಿ ಪೊಲೀಸ್ ಆಯುಕ್ತರ ಹೇಳಿಕೆಯನ್ನೇ ಮುಂದಿಟ್ಟುಕೊಂಡು ಬಿಜೆಪಿ ನಾಯಕ ದೇವೇಂದ್ರ ಫಡಣವೀಸ್, ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಒತ್ತಡ ಹಾಕುತ್ತಿದ್ದಂತೆ ಎನ್ಸಿಪಿ ಪಾಳಯದಲ್ಲೂ ಬಿರುಸಿನ ಚರ್ಚೆ ನಡೆದಿತ್ತು.</p>.<p><strong>ಓದಿ:</strong><a href="https://www.prajavani.net/india-news/param-birs-letter-waze-case-tainted-mvas-image-allies-need-to-introspect-raut-815233.html" itemprop="url">ಮಹಾರಾಷ್ಟ್ರ ಗೃಹ ಸಚಿವರ ವಿರುದ್ಧ ಆರೋಪ: ಎಂವಿಎ ಸರ್ಕಾರದ ವರ್ಚಸ್ಸಿಗೆ ಧಕ್ಕೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>