<p class="title"><strong>ಚಂಡೀಗಡ:</strong> ಲವ್ ಜಿಹಾದ್ ತಡೆಗೆ ಕಾಯ್ದೆಯನ್ನು ರೂಪಿಸಲು ಹರಿಯಾಣ ಸರ್ಕಾರ ಚಿಂತನೆ ನಡೆಸಿದೆ ಎಂಂದು ಗೃಹ ಸಚಿವ ಅನಿಲ್ ವಿಜ್ ಭಾನುವಾರ ತಿಳಿಸಿದ್ದು, ಈ ಸಂಬಂಧ ಟ್ವೀಟ್ ಮಾಡಿದ್ದಾರೆ.</p>.<p class="title">ಉತ್ತರ ಪ್ರದೇಶ ಸರ್ಕಾರವು ಈ ಸಂಬಂಧ ಕಾಯ್ದೆಯನ್ನು ರೂಪಿಸಲಿದೆ ಎಂದು ಆ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರೂ ಶನಿವಾರವಷ್ಟೇ ಹೇಳಿದ್ದರು.</p>.<p>ಕಳೆದ ವಾರ ಹರಿಯಾಣದ ಬಲ್ಲಾಭ್ಗರ್ನಲ್ಲಿ 21 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ಗುಂಡಿನಿಂದ ಹತ್ಯೆ ಮಾಡಲಾಗಿತ್ತು. ಕುಟುಂಬ ಸದಸ್ಯರು, ‘ವ್ಯಕ್ತಿಯೊಬ್ಬ, ವಿವಾಹ ಆಗುವಂತೆ, ಮತಾಂತರಗೊಳ್ಳುವಂತೆ ಒತ್ತಾಯಿಸುತ್ತಿದ್ದ’ಎಂದು ಆರೋಪಿಸಿದ್ದರು.</p>.<p>ವಿಎಚ್ಪಿ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಅವರು ಮೃತಳ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ್ದು, ಲವ್ ಜಿಹಾದ್ ಬೆಳವಣಿಗೆ ಕುರಿತು ಆತಂಕ ವ್ಯಕ್ತಪಡಿಸಿದ್ದರು.</p>.<p>ಹರಿಯಾಣ ಸರ್ಕಾರ ಪ್ರಕರಣದ ತನಿಖೆಗೆ ಮೂವರು ಸದಸ್ಯರ ವಿಶೇಷ ತನಿಖಾ ತಂಡವನ್ನು ರಚನೆ ಮಾಡಿತ್ತು. ಪೊಲೀಸರು ಪ್ರಕರಣದ ಪ್ರಮುಖ ಆರೋಪಿ ತೌಸಿಫ್ ಮತ್ತು ರೆಹಾನ್ ಎಂಬವರನ್ನು ಈ ಸಂಬಂಧ ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಚಂಡೀಗಡ:</strong> ಲವ್ ಜಿಹಾದ್ ತಡೆಗೆ ಕಾಯ್ದೆಯನ್ನು ರೂಪಿಸಲು ಹರಿಯಾಣ ಸರ್ಕಾರ ಚಿಂತನೆ ನಡೆಸಿದೆ ಎಂಂದು ಗೃಹ ಸಚಿವ ಅನಿಲ್ ವಿಜ್ ಭಾನುವಾರ ತಿಳಿಸಿದ್ದು, ಈ ಸಂಬಂಧ ಟ್ವೀಟ್ ಮಾಡಿದ್ದಾರೆ.</p>.<p class="title">ಉತ್ತರ ಪ್ರದೇಶ ಸರ್ಕಾರವು ಈ ಸಂಬಂಧ ಕಾಯ್ದೆಯನ್ನು ರೂಪಿಸಲಿದೆ ಎಂದು ಆ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರೂ ಶನಿವಾರವಷ್ಟೇ ಹೇಳಿದ್ದರು.</p>.<p>ಕಳೆದ ವಾರ ಹರಿಯಾಣದ ಬಲ್ಲಾಭ್ಗರ್ನಲ್ಲಿ 21 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ಗುಂಡಿನಿಂದ ಹತ್ಯೆ ಮಾಡಲಾಗಿತ್ತು. ಕುಟುಂಬ ಸದಸ್ಯರು, ‘ವ್ಯಕ್ತಿಯೊಬ್ಬ, ವಿವಾಹ ಆಗುವಂತೆ, ಮತಾಂತರಗೊಳ್ಳುವಂತೆ ಒತ್ತಾಯಿಸುತ್ತಿದ್ದ’ಎಂದು ಆರೋಪಿಸಿದ್ದರು.</p>.<p>ವಿಎಚ್ಪಿ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಅವರು ಮೃತಳ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ್ದು, ಲವ್ ಜಿಹಾದ್ ಬೆಳವಣಿಗೆ ಕುರಿತು ಆತಂಕ ವ್ಯಕ್ತಪಡಿಸಿದ್ದರು.</p>.<p>ಹರಿಯಾಣ ಸರ್ಕಾರ ಪ್ರಕರಣದ ತನಿಖೆಗೆ ಮೂವರು ಸದಸ್ಯರ ವಿಶೇಷ ತನಿಖಾ ತಂಡವನ್ನು ರಚನೆ ಮಾಡಿತ್ತು. ಪೊಲೀಸರು ಪ್ರಕರಣದ ಪ್ರಮುಖ ಆರೋಪಿ ತೌಸಿಫ್ ಮತ್ತು ರೆಹಾನ್ ಎಂಬವರನ್ನು ಈ ಸಂಬಂಧ ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>