ರಿಷಿಕೇಶ ಸಮೀಪದ ವನಂತರಾ ರೆಸಾರ್ಟ್ನಲ್ಲಿ ಸ್ವಾಗತಕಾರಿಣಿಯಾಗಿ ಕೆಲಸ ಮಾಡುತ್ತಿದ್ದ ಅಂಕಿತಾ ಅವರನ್ನು ರೆಸಾರ್ಡ್ ಮಾಲೀಕ ಪುಲ್ಕಿತ್ ಆರ್ಯ ಮತ್ತು ಆತನ ಇಬ್ಬರು ಸ್ನೇಹಿತರು ಲೈಂಗಿಕ ಸೇವೆಗೆ ಒತ್ತಾಯಿಸಿದ್ದರು. ಇದಕ್ಕೆ ನಿರಾಕರಿಸಿದ್ದ ಅಂಕಿತಾ ಅವರನ್ನು ಹತ್ಯೆ ಮಾಡಲಾಗಿತ್ತು. ಸ್ಥಳೀಯ ಬಿಜೆಪಿ ನಾಯಕರೊಬ್ಬರ ಮಗನಾಗಿರುವ ಆರ್ಯ ಮತ್ತು ಆತನ ಸ್ನೇಹಿತರನ್ನು ಹತ್ಯೆಯ ಆರೋಪದಲ್ಲಿ ಬಂಧಿಸಲಾಗಿದೆ.