ಸಕ್ಕರೆ ಕಾರ್ಖಾನೆಗಳ ಮಾರಾಟದಲ್ಲಿ ₹ 25000 ಕೋಟಿ ಹಗರಣ:ತನಿಖೆಗೆ ‘ಅಣ್ಣಾ’ ಪತ್ರ

ಮುಂಬೈ: ಮಹಾರಾಷ್ಟ್ರದ ಸಹಕಾರ ಸಕ್ಕರೆ ಕಾರ್ಖಾನೆಗಳ ಮಾರಾಟದಲ್ಲಿ ನಡೆದಿದೆ ಎನ್ನಲಾದ ₹25000 ಕೋಟಿ ಹಗರಣ ಕುರಿತು ತನಿಖೆ ನಡೆಸಬೇಕು ಎಂದು ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಆಗ್ರಹಪಡಿಸಿದ್ದಾರೆ.
ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು, ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
‘ಈ ಹಗರಣದಲ್ಲಿ ರಾಜಕಾರಣಿಗಳು, ಅಧಿಕಾರಿಗಳು ಭಾಗಿಯಾಗಿರುವ ಶಂಕೆ ಇದೆ. ಸಹಕಾರ ಸಕ್ಕರೆ ಕಾರ್ಖಾನೆಗಳನ್ನು ಕೈಗೆಟುಕುವ ದರಕ್ಕೆ ಖಾಸಗಿಯವರಿಗೆ ಮಾರಲಾಗಿದೆ. ಈ ಬಗ್ಗೆ ಪಾರದರ್ಶಕ ತನಿಖೆ ಆಗಬೇಕಿದೆ’ ಎಂದಿದ್ದಾರೆ.
ಸಕ್ಕರೆ ಕಾರ್ಖಾನೆಗಳ ಮಾರಾಟದ ವಿರುದ್ಧ ನಾವು ಹೋರಾಟ ನಡೆಸುತ್ತಿದ್ದೇವೆ. 2017ರಲ್ಲಿ ಮುಂಬೈನಲ್ಲಿ ದೂರು ದಾಖಲಿಸಿದ್ದೆವು. ಡಿಐಜಿ ದರ್ಜೆಯ ಅಧಿಕಾರಿಯನ್ನು ತನಿಖೆಗೆ ನಿಯೋಜಿಸಲಾಗಿತ್ತು. ಈ ಹಗರಣ ಕುರಿತು ಕ್ರಮ ಜರುಗಿಸಲು ಮಹಾರಾಷ್ಟ್ರ ಸರ್ಕಾರ ಸಿದ್ಧವಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಬಿಜೆಪಿ ಸೇರಿದ್ದೇಕೆ? ಉತ್ತರ ನೀಡಿದ್ದಾರೆ ಮುಲಾಯಂ ಸೊಸೆ ಅಪರ್ಣಾ ಯಾದವ್
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.