ಸಭಾಧ್ಯಕ್ಷ ವಿಜಯ್ ಕುಮಾರ್ ಸಿನ್ಹಾ ಅವರ ಮನವಿ ಮೇರೆಗೆ ಪ್ರತಿಭಟಿಸುತ್ತಿದ್ದ ಸದಸ್ಯರು ತಮ್ಮ ಆಸನಗಳಿಗೆ ಹಿಂತಿರುಗಿದರು.ಕಲಾಪದಲ್ಲಿ ಸಂಸದೀಯ ವ್ಯವಹಾರಗಳ ಸಚಿವ ವಿಜಯ್ ಕುಮಾರ್ ಚೌಧರಿ ಸರ್ಕಾರದ ಪರವಾಗಿ ಉತ್ತರಿಸಿದರು. ಆದರೆ ಇದಕ್ಕೆ ಅತೃಪ್ತಿ ವ್ಯಕ್ತಪಡಿಸಿದ ವಿರೋಧ ಪಕ್ಷದ ಸದಸ್ಯರು ಕಲಾಪ ಸಲಹಾ ಸಮಿತಿ ಸಭೆ ನಡೆಸುವಂತೆ ಒತ್ತಾಯಿಸಿದರು.ನಂತರ ಕಲಾಪ ಮುಂದೂಡಲಾಯಿತು.