<p><strong>ಚಂಡೀಗಡ</strong>: ‘ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಕೈಗೊಳ್ಳುವ ಯಾವುದೇ ನಿರ್ಧಾರ ಎಲ್ಲರಿಗೂ ಒಪ್ಪಿಗೆಯಾಗುವ ರೀತಿ ಇರಲಿದೆ’ ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಶನಿವಾರ ಇಲ್ಲಿ ಹೇಳಿದರು.</p>.<p>ಪಕ್ಷದ ರಾಜ್ಯ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹರೀಶ್ ರಾವತ್ ಅವರನ್ನು ಭೇಟಿ ಮಾಡಿದ ನಂತರ ಅವರು ಮಾತನಾಡಿದರು.</p>.<p>ಮುಖಂಡ ನವಜೋತ್ ಸಿಂಗ್ ಸಿಧು ಅವರನ್ನು ಪಕ್ಷದ ಪಂಜಾಬ್ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.</p>.<p>‘ಹರೀಶ್ ರಾವತ್ ಅವರೊಂದಿಗಿನ ಮಾತುಕತೆ ಫಲಪ್ರದವಾಗಿತ್ತು. ನಾನು ಕೆಲವು ವಿಷಯಗಳನ್ನುಈ ಭೇಟಿ ವೇಳೆ ಪ್ರಸ್ತಾಪಿಸಿದೆ. ಅವುಗಳನ್ನು ಪಕ್ಷದ ಅಧ್ಯಕ್ಷರ ಗಮನಕ್ಕೆ ತರುವುದಾಗಿ ಅವರು ಭರವಸೆ ನೀಡಿದರು’ ಎಂದು ಅವರು ಟ್ವೀಟ್ ಸಹ ಮಾಡಿದ್ದಾರೆ.</p>.<p>ಅಮರಿಂದರ್ ಸಿಂಗ್ ಮತ್ತು ನವಜೋತ್ ಸಿಂಗ್ ಸಿಧು ಅವರ ನಡುವಿನ ಭಿನ್ನಾಭಿಪ್ರಾಯ ಹೆಚ್ಚಿತ್ತಿರುವ ಹಿನ್ನೆಲೆಯಲ್ಲಿ ಹರೀಶ್ ರಾವತ್ ಅವರು ಚಂಡೀಗಡಕ್ಕೆ ದೌಡಾಯಿಸಿದ್ದು, ಪಕ್ಷದ ಬೆಳವಣಿಗೆಗಳ ಕುರಿತು ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.</p>.<p>ಅಮರಿಂದರ್ ಸಿಂಗ್ ಅವರು ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದು, ಪಕ್ಷದಲ್ಲಿನ ಬೆಳವಣಿಗೆ ಕುರಿತು ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಸಮಾಧಾನಪಡಿಸುವ ಯತ್ನವೂ ರಾವತ್ ಅವರ ಭೇಟಿಯ ಉದ್ದೇಶವಾಗಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಡ</strong>: ‘ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಕೈಗೊಳ್ಳುವ ಯಾವುದೇ ನಿರ್ಧಾರ ಎಲ್ಲರಿಗೂ ಒಪ್ಪಿಗೆಯಾಗುವ ರೀತಿ ಇರಲಿದೆ’ ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಶನಿವಾರ ಇಲ್ಲಿ ಹೇಳಿದರು.</p>.<p>ಪಕ್ಷದ ರಾಜ್ಯ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹರೀಶ್ ರಾವತ್ ಅವರನ್ನು ಭೇಟಿ ಮಾಡಿದ ನಂತರ ಅವರು ಮಾತನಾಡಿದರು.</p>.<p>ಮುಖಂಡ ನವಜೋತ್ ಸಿಂಗ್ ಸಿಧು ಅವರನ್ನು ಪಕ್ಷದ ಪಂಜಾಬ್ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.</p>.<p>‘ಹರೀಶ್ ರಾವತ್ ಅವರೊಂದಿಗಿನ ಮಾತುಕತೆ ಫಲಪ್ರದವಾಗಿತ್ತು. ನಾನು ಕೆಲವು ವಿಷಯಗಳನ್ನುಈ ಭೇಟಿ ವೇಳೆ ಪ್ರಸ್ತಾಪಿಸಿದೆ. ಅವುಗಳನ್ನು ಪಕ್ಷದ ಅಧ್ಯಕ್ಷರ ಗಮನಕ್ಕೆ ತರುವುದಾಗಿ ಅವರು ಭರವಸೆ ನೀಡಿದರು’ ಎಂದು ಅವರು ಟ್ವೀಟ್ ಸಹ ಮಾಡಿದ್ದಾರೆ.</p>.<p>ಅಮರಿಂದರ್ ಸಿಂಗ್ ಮತ್ತು ನವಜೋತ್ ಸಿಂಗ್ ಸಿಧು ಅವರ ನಡುವಿನ ಭಿನ್ನಾಭಿಪ್ರಾಯ ಹೆಚ್ಚಿತ್ತಿರುವ ಹಿನ್ನೆಲೆಯಲ್ಲಿ ಹರೀಶ್ ರಾವತ್ ಅವರು ಚಂಡೀಗಡಕ್ಕೆ ದೌಡಾಯಿಸಿದ್ದು, ಪಕ್ಷದ ಬೆಳವಣಿಗೆಗಳ ಕುರಿತು ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.</p>.<p>ಅಮರಿಂದರ್ ಸಿಂಗ್ ಅವರು ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದು, ಪಕ್ಷದಲ್ಲಿನ ಬೆಳವಣಿಗೆ ಕುರಿತು ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಸಮಾಧಾನಪಡಿಸುವ ಯತ್ನವೂ ರಾವತ್ ಅವರ ಭೇಟಿಯ ಉದ್ದೇಶವಾಗಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>