ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸೋನಿಯಾ ಗಾಂಧಿ ಕೈಗೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧ’: ಅಮರಿಂದರ್‌ ಸಿಂಗ್

ಪಂಜಾಬ್‌ ಉಸ್ತುವಾರಿ ರಾವತ್‌ ಭೇಟಿ ಬಳಿಕ ಸಿ.ಎಂ ಅಮರಿಂದರ್‌ ಸಿಂಗ್‌ ಹೇಳಿಕೆ
Last Updated 17 ಜುಲೈ 2021, 10:25 IST
ಅಕ್ಷರ ಗಾತ್ರ

ಚಂಡೀಗಡ: ‘ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಕೈಗೊಳ್ಳುವ ಯಾವುದೇ ನಿರ್ಧಾರ ಎಲ್ಲರಿಗೂ ಒಪ್ಪಿಗೆಯಾಗುವ ರೀತಿ ಇರಲಿದೆ’ ಎಂದು ಪಂಜಾಬ್‌ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌ ಶನಿವಾರ ಇಲ್ಲಿ ಹೇಳಿದರು.

ಪಕ್ಷದ ರಾಜ್ಯ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹರೀಶ್‌ ರಾವತ್‌ ಅವರನ್ನು ಭೇಟಿ ಮಾಡಿದ ನಂತರ ಅವರು ಮಾತನಾಡಿದರು.

ಮುಖಂಡ ನವಜೋತ್‌ ಸಿಂಗ್‌ ಸಿಧು ಅವರನ್ನು ಪಕ್ಷದ ಪಂಜಾಬ್‌ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

‘ಹರೀಶ್‌ ರಾವತ್‌ ಅವರೊಂದಿಗಿನ ಮಾತುಕತೆ ಫಲಪ್ರದವಾಗಿತ್ತು. ನಾನು ಕೆಲವು ವಿಷಯಗಳನ್ನುಈ ಭೇಟಿ ವೇಳೆ ಪ್ರಸ್ತಾಪಿಸಿದೆ. ಅವುಗಳನ್ನು ಪಕ್ಷದ ಅಧ್ಯಕ್ಷರ ಗಮನಕ್ಕೆ ತರುವುದಾಗಿ ಅವರು ಭರವಸೆ ನೀಡಿದರು’ ಎಂದು ಅವರು ಟ್ವೀಟ್‌ ಸಹ ಮಾಡಿದ್ದಾರೆ.

ಅಮರಿಂದರ್‌ ಸಿಂಗ್‌ ಮತ್ತು ನವಜೋತ್‌ ಸಿಂಗ್‌ ಸಿಧು ಅವರ ನಡುವಿನ ಭಿನ್ನಾಭಿಪ್ರಾಯ ಹೆಚ್ಚಿತ್ತಿರುವ ಹಿನ್ನೆಲೆಯಲ್ಲಿ ಹರೀಶ್ ರಾವತ್‌ ಅವರು ಚಂಡೀಗಡಕ್ಕೆ ದೌಡಾಯಿಸಿದ್ದು, ಪಕ್ಷದ ಬೆಳವಣಿಗೆಗಳ ಕುರಿತು ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.

ಅಮರಿಂದರ್‌ ಸಿಂಗ್‌ ಅವರು ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದು, ಪಕ್ಷದಲ್ಲಿನ ಬೆಳವಣಿಗೆ ಕುರಿತು ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಸಮಾಧಾನಪಡಿಸುವ ಯತ್ನವೂ ರಾವತ್‌ ಅವರ ಭೇಟಿಯ ಉದ್ದೇಶವಾಗಿದೆ ಎಂದು ಕಾಂಗ್ರೆಸ್‌ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT