‘ಬ್ರಿಟಿಷರ ಕಾಲದ ಮನಃಸ್ಥಿತಿಯಿಂದ ಹೊರಬರುವ ಉದ್ದೇಶದಿಂದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಹಲವು ಕ್ರಮಗಳನ್ನು ಕೈಗೊಂಡಿದೆ. ಛತ್ರಪತಿ ಶಿವಾಜಿಯಿಂದ ಸ್ಫೂರ್ತಿ ಪಡೆದುಕೊಂಡು ಭಾರತೀಯ ನೌಕಾಪಡೆಯ ಧ್ವಜವನ್ನು ಬದಲು ಮಾಡಲಾಗಿದೆ. ಸುಮಾರು ಸಾವಿರಕ್ಕೂ ಹೆಚ್ಚು ಬ್ರಿಟಿಷರ ಕಾಲದ ಕಾನೂನುಗಳನ್ನು ರದ್ದು ಪಡಿಸಲಾಗಿದೆ. ಜೊತೆಗೆ, ರಾಜಪಥವನ್ನು ಕರ್ತವ್ಯಪಥ ಎಂದು ಮರುನಾಮಕರಣ ಮಾಡಲಾಗಿದೆ. ಇಂಡಿಯಾ ಗೇಟ್ನಲ್ಲಿ ನೇತಾಜಿ ಅವರ ಪ್ರತಿಮೆಯನ್ನು ಸ್ಥಾಪಿಸಲಾಗಿದೆ’ ಎಂದು ವಿವರಿಸಿದರು.