ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಟಿಡಿ ಮಂಡಳಿಯ ಅಧ್ಯಕ್ಷರಾಗಿ ವೈ.ವಿ ಸುಬ್ಬಾರೆಡ್ಡಿ ಮರುನೇಮಕ

Last Updated 8 ಆಗಸ್ಟ್ 2021, 10:05 IST
ಅಕ್ಷರ ಗಾತ್ರ

ಅಮರಾವತಿ: ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್‌ ಜಗನ್‌ ಮೋಹನ್‌ ರೆಡ್ಡಿ ಅವರ ಸಂಬಂಧಿ ವೈ. ವಿ ಸುಬ್ಬಾರೆಡ್ಡಿ ಅವರನ್ನುತಿರುಪತಿ ತಿರುಮಲ ದೇಗುಲದ ಆಡಳಿತ ಮಂಡಳಿಯ(ಟಿಟಿಡಿ) ಅಧ್ಯಕ್ಷರಾಗಿ ಭಾನುವಾರ ಮರು ನೇಮಕ ಮಾಡಲಾಗಿದೆ.

ಈ ಸಂಬಂಧ ಪ್ರಧಾನ ಕಾರ್ಯದರ್ಶಿ (ಕಂದಾಯ-ದತ್ತಿಗಳು) ಜಿ. ವಾಣಿ ಮೋಹನ್ ಅವರು ಆದೇಶ ಹೊರಡಿಸಿದ್ದಾರೆ. ಮಂಡಳಿಯ ಇತರ ಸದಸ್ಯರನ್ನು ಆದಷ್ಟು ಬೇಗ ಆಯ್ಕೆ ಮಾಡಲಾಗುವುದು ಎಂದು ಆದೇಶದಲ್ಲಿ ಹೇಳಲಾಗಿದೆ.

ಮಾಜಿ ಸಂಸದ ಸುಬ್ಬಾ ರೆಡ್ಡಿ ಅವರು ಈ ವರ್ಷ ಜೂನ್‌ಗೆ ಕೊನೆಗೊಂಡಂತೆ ಎರಡು ವರ್ಷಗಳ ಅವಧಿಗೆ ಟಿಟಿಡಿ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಸುಬ್ಬಾರೆಡ್ಡಿ ಅವರನ್ನು ಆಂಧ್ರಪ್ರದೇಶದ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಲಾಗುವುದು ಎಂಬ ಮಾತುಗಳು ಕೇಳಿ ಬಂದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT