ಹೈದರಾಬಾದ್: ತೆಲುಗು ದೇಶಂ ಪಕ್ಷದ ಭದ್ರಕೋಟೆ ಎನಿಸಿರುವ ಚಿತ್ತೂರು ಜಿಲ್ಲೆಯ ಕುಪ್ಪಂ ವಿಧಾನಸಭಾ ಕ್ಷೇತ್ರದ ಸ್ಥಳೀಯ ಸಂಸ್ಥೆಗಳಿಗೆ ನಡೆದ ಮೂರನೇ ಹಂತದ ಚುನಾವಣೆಯಲ್ಲಿ ವೈಎಸ್ಆರ್ ಕಾಂಗ್ರೆಸ್ ಮೇಲುಗೈ ಸಾಧಿಸಿದೆ.ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಕುಪ್ಪಂ ಕ್ಷೇತ್ರದಿಂದ ಸತತ ಏಳು ಬಾರಿ ಆರಿಸಿ ಬಂದಿದ್ದಾರೆ. ಇಲ್ಲೇ ಟಿಡಿಪಿ ಭಾರಿ ಹಿನ್ನಡೆ ಅನುಭವಿಸಿದೆ.