ಶ್ರೀರಾಮನ ಆಶೀರ್ವಾದ ಪಡೆಯಲು ಜೂನ್ 5 ರಂದು ಅಯೋಧ್ಯೆಗೆ ಭೇಟಿ ನೀಡುವುದಾಗಿ ಠಾಕ್ರೆ ಅವರು ಏಪ್ರಿಲ್ 17 ರಂದು ಪುಣೆಯಲ್ಲಿ ಘೋಷಿಸಿದ್ದರು. ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಅಯೋಧ್ಯೆ ಚಳವಳಿಗೆ ಆರ್ಎಸ್ಎಸ್ ಕಾರ್ಯಕರ್ತರ ಕೊಡುಗೆ ಏನು? ಚಳವಳಿಗೆ ಎಷ್ಟು ಮಂದಿ ಕಾರ್ಯಕರ್ತರು ಪ್ರಾಣ ತ್ಯಾಗ ಮಾಡಿದ್ದಾರೆ? ಕೇಂದ್ರ ಸರ್ಕಾರ ಮತ್ತು ಸುಪ್ರೀಂ ಕೋರ್ಟ್ನ ಕಾರಣದಿಂದಾಗಿ ಆಯೋಧ್ಯೆಯಲ್ಲಿ ರಾಮ ಮಂದಿರನಿರ್ಮಾಣವಾಗುತ್ತಿದೆ ಎಂದು ಅವರು ಹೇಳಿದ್ದರು.