ನವದೆಹಲಿ:ಅಕ್ರಮ ಗಣಿಗಾರಿಕೆಯಿಂದ ಕೃಷ್ಣರಾಜ ಸಾಗರ ಜಲಾಶಯವನ್ನು ರಕ್ಷಿಸುವಂತೆ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಕೇಂದ್ರದ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೆಖಾವತ್ ಅವರನ್ನು ಮಂಗಳವಾರ ಭೇಟಿ ಮಾಡಿದ ಅವರು, ಈ ಸಂಬಂಧ ಸುದೀರ್ಘ ಚರ್ಚೆ ನಡೆಸಿದರು.
ಕೆಆರ್ ಎಸ್ ಸುತ್ತಮುತ್ತಲ ಪ್ರದೇಶದಲ್ಲಿ ನಡೆಸಲಾಗುತ್ತಿರುವ ಗಣಿಕಾರಿಕೆಯಿಂದಾಗಿ ರೈತರ ಜೀವನಾಡಿ ಎಂದು ಹೆಸರಾಗಿರುವ ಪ್ರಮುಖ ಜಲಾಶಯಕ್ಕೆ ಅಪಾಯ ಎದುರಾಗಿದೆ. ಅಲ್ಲದೆ ಕ್ವಾರಿಗಳಲ್ಲಿ ಬಳಸುವ ಸ್ಫೋಟಕಗಳಿಂದಾಗಿ ಇತ್ತೀಚೆಗಷ್ಟೇ ಗೋಡೆ ಕುಸಿದಿರುವುದು ಅಪಾಯದ ಕರೆಗಂಟೆಯಾಗಿದೆ ಎಂದು ಅವರು ವಿವರಿಸಿದರು.
ಗಣಿಕಾರಿಕೆಯಿಂದ ಜಲಾಶಯದ ಕಟ್ಟಡಕ್ಕೆ ಉಂಟಾಗಲಿರುವ ಪರಿಣಾಮದ ಕುರಿತು ಅಧ್ಯಯನ ನಡೆಸಲು ಉನ್ನತ ಮಟ್ಟದ ಸಮಿತಿ ರಚಿಸುವಂತೆ ಅವರು ಈ ಸಂದರ್ಭ ಕೋರಿದರು.
ಸಚಿವ ಗಜೇಂದ್ರಸಿಂಗ್ ಶೆಖಾವತ್ ಅವರನ್ನು ಭೇಟಿ ಮಾಡಿ ಚರ್ಚಿಸಿದ ಸಂಸದೆ ಸುಮಲತಾ ಅಂಬರೀಷ್