<p><strong>ಅಯೋಧ್ಯೆ:</strong> ಭಾರತ್ ಜೋಡೊ ಯಾತ್ರೆ ಕೈಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ರಾಮಮಂದಿರ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ಶ್ಲಾಘಿಸಿದ್ದಾರೆ.</p>.<p>ರಾಹುಲ್ ಭಾರತ್ ಜೋಡೊ ಯಾತ್ರೆ ಕೈಗೊಂಡಿರುವುದಲ್ಲಿ ಯಾವುದೇ ತಪ್ಪಿಲ್ಲ. ಕಾಲ್ನಡಿಗೆ ಯಾತ್ರೆ ನಡೆಸುತ್ತಿರುವ ರಾಹುಲ್ರನ್ನು ಅಭಿನಂದಿಸುವುದಾಗಿ ತಿಳಿಸಿದರು.</p>.<p>ನಾನು ಆರ್ಎಸ್ಎಸ್ ಕಾರ್ಯಕರ್ತ. ಆದರೆ ಭಾರತ್ ಜೋಡೊ ಯಾತ್ರೆಯನ್ನು ಎಂದಿಗೂ ಖಂಡಿಸಿಲ್ಲ ಎಂದು ಅವರು ತಿಳಿಸಿದರು.</p>.<p>ಈ ವಿಪರೀತ ಹವಾಮಾನ ಪರಿಸ್ಥಿತಿಯಲ್ಲೂ ಯಾತ್ರೆ ನಡೆಸುತ್ತಿರುವ ರಾಹುಲ್ ಅವರನ್ನು ಮೆಚ್ಚಬೇಕು. ಪ್ರತಿಯೊಬ್ಬರೂ ದೇಶದ ಯಾತ್ರೆ ಕೈಗೊಳ್ಳಬೇಕು ಎಂದು ಅವರು ಹೇಳಿದರು.</p>.<p>ಈ ಮೊದಲು ಅಯೋಧ್ಯೆ ರಾಮ ಜನ್ಮಭೂಮಿ ದೇಗುಲದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಭಾರತ್ ಜೋಡೊ ಯಾತ್ರೆ ಕೈಗೊಂಡಿರುವ ರಾಹುಲ್ ಗಾಂಧಿ ಅವರನ್ನು ಆಶೀರ್ವದಿಸುವುದಾಗಿ ಪತ್ರ ಬರೆದಿದ್ದರು.</p>.<p>ರಾಮಮಂದಿರ ಟ್ರಸ್ಟ್ನ ಮತ್ತೊಬ್ಬ ಟ್ರಸ್ಟಿ ಗೋವಿಂದ ದೇವಗಿರಿ ಕೂಡ ಭಾರತ್ ಜೋಡೊ ಯಾತ್ರೆಯನ್ನು ಶ್ಲಾಘಿಸಿದ್ದಾರೆ. ದೇಶವು ಐಕ್ಯತೆ, ಬಲಿಷ್ಠ ಮತ್ತು ಸೌಹಾರ್ದಯುತವಾಗಿ ಉಳಿಯಲು ರಾಹುಲ್ರನ್ನು ಶ್ರೀರಾಮ ದೇವರು ಆಶೀರ್ವದಿಸಬೇಕು ಎಂದು ಪ್ರಾರ್ಥಿಸುತ್ತೇನೆ. ಭಾರತ್ ಜೋಡೊ ಯಾತ್ರೆಯು ದೇಶವನ್ನು ಒಗ್ಗೂಡಿಸಬೇಕು ಎಂದು ಆಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಯೋಧ್ಯೆ:</strong> ಭಾರತ್ ಜೋಡೊ ಯಾತ್ರೆ ಕೈಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ರಾಮಮಂದಿರ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ಶ್ಲಾಘಿಸಿದ್ದಾರೆ.</p>.<p>ರಾಹುಲ್ ಭಾರತ್ ಜೋಡೊ ಯಾತ್ರೆ ಕೈಗೊಂಡಿರುವುದಲ್ಲಿ ಯಾವುದೇ ತಪ್ಪಿಲ್ಲ. ಕಾಲ್ನಡಿಗೆ ಯಾತ್ರೆ ನಡೆಸುತ್ತಿರುವ ರಾಹುಲ್ರನ್ನು ಅಭಿನಂದಿಸುವುದಾಗಿ ತಿಳಿಸಿದರು.</p>.<p>ನಾನು ಆರ್ಎಸ್ಎಸ್ ಕಾರ್ಯಕರ್ತ. ಆದರೆ ಭಾರತ್ ಜೋಡೊ ಯಾತ್ರೆಯನ್ನು ಎಂದಿಗೂ ಖಂಡಿಸಿಲ್ಲ ಎಂದು ಅವರು ತಿಳಿಸಿದರು.</p>.<p>ಈ ವಿಪರೀತ ಹವಾಮಾನ ಪರಿಸ್ಥಿತಿಯಲ್ಲೂ ಯಾತ್ರೆ ನಡೆಸುತ್ತಿರುವ ರಾಹುಲ್ ಅವರನ್ನು ಮೆಚ್ಚಬೇಕು. ಪ್ರತಿಯೊಬ್ಬರೂ ದೇಶದ ಯಾತ್ರೆ ಕೈಗೊಳ್ಳಬೇಕು ಎಂದು ಅವರು ಹೇಳಿದರು.</p>.<p>ಈ ಮೊದಲು ಅಯೋಧ್ಯೆ ರಾಮ ಜನ್ಮಭೂಮಿ ದೇಗುಲದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಭಾರತ್ ಜೋಡೊ ಯಾತ್ರೆ ಕೈಗೊಂಡಿರುವ ರಾಹುಲ್ ಗಾಂಧಿ ಅವರನ್ನು ಆಶೀರ್ವದಿಸುವುದಾಗಿ ಪತ್ರ ಬರೆದಿದ್ದರು.</p>.<p>ರಾಮಮಂದಿರ ಟ್ರಸ್ಟ್ನ ಮತ್ತೊಬ್ಬ ಟ್ರಸ್ಟಿ ಗೋವಿಂದ ದೇವಗಿರಿ ಕೂಡ ಭಾರತ್ ಜೋಡೊ ಯಾತ್ರೆಯನ್ನು ಶ್ಲಾಘಿಸಿದ್ದಾರೆ. ದೇಶವು ಐಕ್ಯತೆ, ಬಲಿಷ್ಠ ಮತ್ತು ಸೌಹಾರ್ದಯುತವಾಗಿ ಉಳಿಯಲು ರಾಹುಲ್ರನ್ನು ಶ್ರೀರಾಮ ದೇವರು ಆಶೀರ್ವದಿಸಬೇಕು ಎಂದು ಪ್ರಾರ್ಥಿಸುತ್ತೇನೆ. ಭಾರತ್ ಜೋಡೊ ಯಾತ್ರೆಯು ದೇಶವನ್ನು ಒಗ್ಗೂಡಿಸಬೇಕು ಎಂದು ಆಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>