ದೇಶದಲ್ಲಿಯೇ ಇದೇ ಮೊದಲ ಬಾರಿಗೆ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿ ರಾಜ್ಯದಲ್ಲಿ ಕ್ರಾಂತಿಕಾರಕ ಬದಲಾವಣೆಯನ್ನು ತರಲಾಗಿದೆ. ನೂತನ ವ್ಯವಸ್ಥೆಯು ಸಂಪೂರ್ಣವಾಗಿ ಪಾರದರ್ಶಕವಾಗಿದ್ದು, ಯಾವುದೇ ನಕಲು, ಲೋಪಕ್ಕೆ ಅವಕಾಶ ಇರುವುದಿಲ್ಲ. ಅಲ್ಲದೆ, ನೇಮಕಾತಿ ಪ್ರಕ್ರಿಯೆಯನ್ನೂ ಇನ್ನಷ್ಟು ಸರಳವಾಗಿಸಲಿದೆ ಎಂದು ಎಪಿಪಿಎಸ್ಸಿ ಕಾರ್ಯದರ್ಶಿ, ಐಪಿಎಸ್ ಅಧಿಕಾರಿ ಪಿ.ಎಸ್.ಆರ್.ಆಂಜನೇಯುಲು ಹೇಳಿದ್ದಾರೆ.