ಇದಕ್ಕೂ ಮುನ್ನ, ಮಾತನಾಡಿದ ಕಾನೂನು ಸಚಿವ ರವಿಶಂಕರ್ ಪ್ರಸಾದ್, ‘ ರಾಜಿ ಅಥವಾ ಮಧ್ಯಸ್ಥಿಕೆ ಮೂಲಕ ಪರಿಹಾರ ಪಡೆಯುವ ಪ್ರಕ್ರಿಯೆ ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿರಬೇಕು. ಸಂಧಾನದ ಹೆಸರಿನಲ್ಲಿ ತೆರಿಗೆದಾರರ ಹಣ ಪೋಲಾಗುವುದನ್ನು ತಡೆಗಟ್ಟುವ ಉದ್ದೇಶದಿಂದ ಈ ಕಾಯ್ದೆಗೆ ತಿದ್ದುಪಡಿ ತರಲಾಗಿದೆ’ ಎಂದು ಹೇಳಿದರು.