‘ಮಧ್ಯಸ್ಥಿಕೆಯ ಸಂಸ್ಕೃತಿಯನ್ನು ಪ್ರೋತ್ಸಾಹಿಸುವುದು ಸುಲಭದ ಕೆಲಸವಲ್ಲ. ಮಧ್ಯಸ್ಥಿಕೆ ಪರವಾದ ನೀತಿಯಿಂದಲೇ ಇದು ಸಾಧ್ಯವಾಗದು. ಈ ನಿಟ್ಟಿನಲ್ಲಿ ಕೆಲ ನವೀನ ಕ್ರಮಗಳನ್ನು ಅನುಸರಿಸುವುದು ಅಗತ್ಯ. ಕೆಲವೊಮ್ಮೆ ಸರ್ಕಾರ ಅಥವಾ ಭಾಗಿದಾರ ವ್ಯಕ್ತಿಗಳು ಮಧ್ಯಸ್ಥಿಕೆಯಲ್ಲಿ ಮೂಡಿದ ಪರಿಹಾರಕ್ರಮವು ಸಾರ್ವಜನಿಕ ನೀತಿ, ಕಾನೂನಿಗೆ ವಿರುದ್ಧವಾಗಿದ್ದು, ಜಾರಿ ಅಸಾಧ್ಯ ಎಂಬ ನಿಲುವಿಗೆ ಬರುತ್ತವೆ. ಇಂಥ ಪ್ರಕರಣಗಳನ್ನು ನಿಭಾಯಿಸಲು ವಿಶೇಷ ವ್ಯವಸ್ಥೆ ರೂಪಿಸುವುದು ಅಗತ್ಯವಾಗಿದೆ’ ಎಂದು ಮುಖ್ಯ ನ್ಯಾಯಮೂರ್ತಿ ಅವರು ಹೇಳಿದರು.