<p><strong>ನವದೆಹಲಿ: </strong>ಭಾರತ– ಚೀನಾ ಗಡಿ ಭಾಗದಲ್ಲಿನ ಭದ್ರತಾ ವ್ಯವಸ್ಥೆ ಪರಿಶೀಲನೆಗಾಗಿ ಸೇನಾ ಮುಖ್ಯಸ್ಥ ಎಂ.ಎಂ.ನರವಣೆ ಅವರು ಪೂರ್ವ ಲಡಾಖ್ನ ಪಾಂಗಾಂಗ್ ತ್ಸೊ ಸರೋವರದ ದಕ್ಷಿಣ ಭಾಗಕ್ಕೆ ಎರಡು ದಿನಗಳ ಭೇಟಿ ನೀಡಿದ್ದಾರೆ.</p>.<p>ಅವರು ಗುರುವಾರ ಲೇಹ್ಗೆ ತೆರಳಿದ್ದು, ಎರಡು ದಿನಗಳ ಕಾಲ ಪಾಂಗೋಂಗ್ ತ್ಸೊ ಸರೋವರದ ದಕ್ಷಿಣ ಭಾಗದಲ್ಲಿ ಸೇನಾ ನಿಯೋಜನೆ ಹಾಗೂ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಲಿದ್ದಾರೆ ಎಂದು ಸೇನಾ ವಿಭಾಗದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಈ ಭಾಗದಲ್ಲಿ ಯಥಾಸ್ಥಿತಿ ಬದಲಿಸಲು ಚೀನಾ ನಡೆಸಿದ ಪ್ರಯತ್ನಗಳನ್ನು ಗಮನದಲ್ಲಿಟ್ಟುಕೊಂಡು ಭದ್ರತಾ ಪರಿಸ್ಥಿತಿಗಳ ಬಗ್ಗೆ ಸಮಗ್ರ ಪರಿಶೀಲನೆ ನಡೆಸಲಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸೇನೆಯ ನಿಯೋಜನೆ, ಭಾರತ ಯುದ್ಧಕ್ಕೆ ನಡೆಸಿರುವ ಸಿದ್ಧತೆ ಕುರಿತು ಜನರಲ್ ನರವಣೆಯವರಿಗೆ ಸೇನಾ ಅಧಿಕಾರಿಗಳು ವಿವರಣೆ ನೀಡಲಿದ್ದಾರೆ.</p>.<p>ಪಾಂಗೊಂಗ್ ಸರೋವರದ ದಕ್ಷಿಣದ ದಂಡೆಯಲ್ಲಿ ಚೀನಾ ಕೆಲವು ಪ್ರದೇಶಗಳನ್ನು ಆಕ್ರಮಿಸಿಕೊಳ್ಳಲು ವಿಫಲವಾದ ನಂತರ ಆ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಾಯಿತು. ಭಾರತ, ಆ ಪ್ರದೇಶದಲ್ಲಿ ಹೆಚ್ಚುವರಿ ಶಸ್ತ್ರಸಜ್ಜಿತ ಯೋಧರನ್ನು ನಿಯೋಜಿಸಿತ್ತು. ಗಡಿಯಲ್ಲಿನ ಯಥಾಸ್ಥಿತಿ ಬದಲಿಸಲು ಚೀನಾ ಪಡೆಗಳು ಮತ್ತೆ ಅಪ್ರಚೋದಿತವಾಗಿ ಮುಂದಾಗಿದ್ದವು ಎಂದು ಭಾರತೀಯ ಸೇನೆ ಸೋಮವಾರ ಆರೋಪಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಭಾರತ– ಚೀನಾ ಗಡಿ ಭಾಗದಲ್ಲಿನ ಭದ್ರತಾ ವ್ಯವಸ್ಥೆ ಪರಿಶೀಲನೆಗಾಗಿ ಸೇನಾ ಮುಖ್ಯಸ್ಥ ಎಂ.ಎಂ.ನರವಣೆ ಅವರು ಪೂರ್ವ ಲಡಾಖ್ನ ಪಾಂಗಾಂಗ್ ತ್ಸೊ ಸರೋವರದ ದಕ್ಷಿಣ ಭಾಗಕ್ಕೆ ಎರಡು ದಿನಗಳ ಭೇಟಿ ನೀಡಿದ್ದಾರೆ.</p>.<p>ಅವರು ಗುರುವಾರ ಲೇಹ್ಗೆ ತೆರಳಿದ್ದು, ಎರಡು ದಿನಗಳ ಕಾಲ ಪಾಂಗೋಂಗ್ ತ್ಸೊ ಸರೋವರದ ದಕ್ಷಿಣ ಭಾಗದಲ್ಲಿ ಸೇನಾ ನಿಯೋಜನೆ ಹಾಗೂ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಲಿದ್ದಾರೆ ಎಂದು ಸೇನಾ ವಿಭಾಗದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಈ ಭಾಗದಲ್ಲಿ ಯಥಾಸ್ಥಿತಿ ಬದಲಿಸಲು ಚೀನಾ ನಡೆಸಿದ ಪ್ರಯತ್ನಗಳನ್ನು ಗಮನದಲ್ಲಿಟ್ಟುಕೊಂಡು ಭದ್ರತಾ ಪರಿಸ್ಥಿತಿಗಳ ಬಗ್ಗೆ ಸಮಗ್ರ ಪರಿಶೀಲನೆ ನಡೆಸಲಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸೇನೆಯ ನಿಯೋಜನೆ, ಭಾರತ ಯುದ್ಧಕ್ಕೆ ನಡೆಸಿರುವ ಸಿದ್ಧತೆ ಕುರಿತು ಜನರಲ್ ನರವಣೆಯವರಿಗೆ ಸೇನಾ ಅಧಿಕಾರಿಗಳು ವಿವರಣೆ ನೀಡಲಿದ್ದಾರೆ.</p>.<p>ಪಾಂಗೊಂಗ್ ಸರೋವರದ ದಕ್ಷಿಣದ ದಂಡೆಯಲ್ಲಿ ಚೀನಾ ಕೆಲವು ಪ್ರದೇಶಗಳನ್ನು ಆಕ್ರಮಿಸಿಕೊಳ್ಳಲು ವಿಫಲವಾದ ನಂತರ ಆ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಾಯಿತು. ಭಾರತ, ಆ ಪ್ರದೇಶದಲ್ಲಿ ಹೆಚ್ಚುವರಿ ಶಸ್ತ್ರಸಜ್ಜಿತ ಯೋಧರನ್ನು ನಿಯೋಜಿಸಿತ್ತು. ಗಡಿಯಲ್ಲಿನ ಯಥಾಸ್ಥಿತಿ ಬದಲಿಸಲು ಚೀನಾ ಪಡೆಗಳು ಮತ್ತೆ ಅಪ್ರಚೋದಿತವಾಗಿ ಮುಂದಾಗಿದ್ದವು ಎಂದು ಭಾರತೀಯ ಸೇನೆ ಸೋಮವಾರ ಆರೋಪಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>