ಎರಡರಿಂದ ಮೂರು ವರ್ಷಗಳಲ್ಲಿ ಈ ಎಲ್ಲ ಪ್ರಕ್ರಿಯೆಗಳು ಕಾರ್ಯರೂಪಕ್ಕೆ ಬರಲಿವೆ ಎಂದು ರಕ್ಷಣಾ ಸಚಿವಾಲಯ ನಿರೀಕ್ಷೆ ಇಟ್ಟುಕೊಂಡಿದೆ. ಜನರಲ್ ರಾವತ್ ಅವರ ನಿಧನ ಸೇನಾಪಡೆಗಳಲ್ಲಿ ದೊಡ್ಡ ನಿರ್ವಾತವನ್ನು ಸೃಷ್ಟಿಸಿದೆ. ಆದರೆ ಅವರ ಸ್ಥಾನಕ್ಕೆ ಬದಲಿ ಆಯ್ಕೆ ಮಾಡುವ ಮೂಲಕ, ರಾವತ್ ಅವರು ಪ್ರಸ್ತಾಪಿಸಿದ್ದ ಸೇನಾ ಸುಧಾರಣಾ ಪ್ರಕ್ರಿಯೆಯ ಕಾವು ಆರದಂತೆ ನೋಡಿಕೊಳ್ಳಲು ಸರ್ಕಾರ ನಿರ್ಧರಿಸಿದೆ.