<p><strong>ನವದೆಹಲಿ:</strong> ಭಾರತದ ಗಡಿಯೊಳಗೆ ಉಗ್ರರು ನುಸುಳಲು ಪಾಕಿಸ್ತಾನ ಸೇನೆಯು ಬೆಂಬಲಿಸುತ್ತಿರುವ ಹಿನ್ನೆಲೆಯಲ್ಲಿ ಗಡಿ ನಿಯಂತ್ರಣ ರೇಖೆಯಾದ್ಯಂತ (ಎಲ್ಒಸಿ) ಹೆಚ್ಚುವರಿ 3,000 ಯೋಧರನ್ನು ನಿಯೋಜಿಸಲಾಗಿದೆ.</p>.<p>‘ಒಳನುಸುಳುವಿಕೆ ತಡೆಯಲು ಎಲ್ಒಸಿಯಲ್ಲಿ ಹೆಚ್ಚುವರಿ ಯೋಧರನ್ನು ನಿಯೋಜಿಸಲಾಗಿದೆ. ಇದರಿಂದ ಪ್ರಯೋಜನವಾಗಿದೆ’ ಎಂದು ಉನ್ನತ ಮೂಲಗಳು ತಿಳಿಸಿವೆ.</p>.<p>ಒಳನುಸುಳುವಿಕೆಯ ದೊಡ್ಡ ಸಂಚುಗಳನ್ನು ವಿಫಲಗೊಳಿಸುವಲ್ಲಿ ಹೆಚ್ಚುವರಿಯಾಗಿ ನಿಯೋಜನೆಗೊಂಡಿರುವ ಯೋಧರು ಯಶಸ್ವಿಯಾಗಿದ್ದಾರೆ. ಅಕ್ಟೋಬರ್–ನವೆಂಬರ್ ಒಳಗೆ ಹೆಚ್ಚು ಉಗ್ರರನ್ನು ಭಾರತದ ಗಡಿಯೊಳಕ್ಕೆ ನುಸುಳಿಸುವ ಪಾಕಿಸ್ತಾನ ಸೇನೆಯ ಸಂಚು ವಿಫಲವಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/pujabi-songs-from-chinese-military-in-ladakh-763350.html" itemprop="url">PV Web Exclusive | ಚೀನಿ ಸೈನಿಕ ನೆಲೆಗಳಿಂದ ಪಂಜಾಬಿ ಹಾಡು: ಇದೆಂಥಾ ಯುದ್ಧತಂತ್ರ</a></p>.<p>ಪಾಕಿಸ್ತಾನ ಸೇನೆಯು ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಲು ಸತತವಾಗಿ ಯತ್ನಿಸುತ್ತಿದೆ. ಈ ಮಧ್ಯೆ, ಸೇನಾ ಮುಖ್ಯಸ್ಥರು ಶ್ರೀನಗರಕ್ಕೆ ಭೇಟಿ ನೀಡಿ ಭದ್ರತಾ ಸ್ಥಿತಿಗತಿಯ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಎಲ್ಒಸಿಯಲ್ಲಿನ ಮುಂಚೂಣಿ ನೆಲೆಗಳಿಗೆ ಭೇಟಿ ನೀಡಿ ಕಾರ್ಯಾಚರಣೆ ಸಿದ್ಧತೆ ಬಗ್ಗೆ ಪರಾಮರ್ಶೆ ನಡೆಸಿದ್ದಾರೆ ಎಂದೂ ಮೂಲಗಳು ಹೇಳಿವೆ.</p>.<p>ಪೂರ್ವ ಲಡಾಖ್ನಲ್ಲಿ ಚೀನಾ ಪಡೆಗಳೊಂದಿಗೆ ಸಂಘರ್ಷ ಸಂಭವಿಸಿ ಉದ್ವಿಗ್ನ ಸ್ಥಿತಿ ಇರುವ ಸಂದರ್ಭದಲ್ಲೇ ಪಾಕ್ ಪಡೆಗಳು ಕದನ ವಿರಾಮ ಉಲ್ಲಂಘನೆ ಹೆಚ್ಚಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತದ ಗಡಿಯೊಳಗೆ ಉಗ್ರರು ನುಸುಳಲು ಪಾಕಿಸ್ತಾನ ಸೇನೆಯು ಬೆಂಬಲಿಸುತ್ತಿರುವ ಹಿನ್ನೆಲೆಯಲ್ಲಿ ಗಡಿ ನಿಯಂತ್ರಣ ರೇಖೆಯಾದ್ಯಂತ (ಎಲ್ಒಸಿ) ಹೆಚ್ಚುವರಿ 3,000 ಯೋಧರನ್ನು ನಿಯೋಜಿಸಲಾಗಿದೆ.</p>.<p>‘ಒಳನುಸುಳುವಿಕೆ ತಡೆಯಲು ಎಲ್ಒಸಿಯಲ್ಲಿ ಹೆಚ್ಚುವರಿ ಯೋಧರನ್ನು ನಿಯೋಜಿಸಲಾಗಿದೆ. ಇದರಿಂದ ಪ್ರಯೋಜನವಾಗಿದೆ’ ಎಂದು ಉನ್ನತ ಮೂಲಗಳು ತಿಳಿಸಿವೆ.</p>.<p>ಒಳನುಸುಳುವಿಕೆಯ ದೊಡ್ಡ ಸಂಚುಗಳನ್ನು ವಿಫಲಗೊಳಿಸುವಲ್ಲಿ ಹೆಚ್ಚುವರಿಯಾಗಿ ನಿಯೋಜನೆಗೊಂಡಿರುವ ಯೋಧರು ಯಶಸ್ವಿಯಾಗಿದ್ದಾರೆ. ಅಕ್ಟೋಬರ್–ನವೆಂಬರ್ ಒಳಗೆ ಹೆಚ್ಚು ಉಗ್ರರನ್ನು ಭಾರತದ ಗಡಿಯೊಳಕ್ಕೆ ನುಸುಳಿಸುವ ಪಾಕಿಸ್ತಾನ ಸೇನೆಯ ಸಂಚು ವಿಫಲವಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/pujabi-songs-from-chinese-military-in-ladakh-763350.html" itemprop="url">PV Web Exclusive | ಚೀನಿ ಸೈನಿಕ ನೆಲೆಗಳಿಂದ ಪಂಜಾಬಿ ಹಾಡು: ಇದೆಂಥಾ ಯುದ್ಧತಂತ್ರ</a></p>.<p>ಪಾಕಿಸ್ತಾನ ಸೇನೆಯು ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಲು ಸತತವಾಗಿ ಯತ್ನಿಸುತ್ತಿದೆ. ಈ ಮಧ್ಯೆ, ಸೇನಾ ಮುಖ್ಯಸ್ಥರು ಶ್ರೀನಗರಕ್ಕೆ ಭೇಟಿ ನೀಡಿ ಭದ್ರತಾ ಸ್ಥಿತಿಗತಿಯ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಎಲ್ಒಸಿಯಲ್ಲಿನ ಮುಂಚೂಣಿ ನೆಲೆಗಳಿಗೆ ಭೇಟಿ ನೀಡಿ ಕಾರ್ಯಾಚರಣೆ ಸಿದ್ಧತೆ ಬಗ್ಗೆ ಪರಾಮರ್ಶೆ ನಡೆಸಿದ್ದಾರೆ ಎಂದೂ ಮೂಲಗಳು ಹೇಳಿವೆ.</p>.<p>ಪೂರ್ವ ಲಡಾಖ್ನಲ್ಲಿ ಚೀನಾ ಪಡೆಗಳೊಂದಿಗೆ ಸಂಘರ್ಷ ಸಂಭವಿಸಿ ಉದ್ವಿಗ್ನ ಸ್ಥಿತಿ ಇರುವ ಸಂದರ್ಭದಲ್ಲೇ ಪಾಕ್ ಪಡೆಗಳು ಕದನ ವಿರಾಮ ಉಲ್ಲಂಘನೆ ಹೆಚ್ಚಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>