ಪಾಕಿಸ್ತಾನ ಸೇನೆಯು ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಲು ಸತತವಾಗಿ ಯತ್ನಿಸುತ್ತಿದೆ. ಈ ಮಧ್ಯೆ, ಸೇನಾ ಮುಖ್ಯಸ್ಥರು ಶ್ರೀನಗರಕ್ಕೆ ಭೇಟಿ ನೀಡಿ ಭದ್ರತಾ ಸ್ಥಿತಿಗತಿಯ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಎಲ್ಒಸಿಯಲ್ಲಿನ ಮುಂಚೂಣಿ ನೆಲೆಗಳಿಗೆ ಭೇಟಿ ನೀಡಿ ಕಾರ್ಯಾಚರಣೆ ಸಿದ್ಧತೆ ಬಗ್ಗೆ ಪರಾಮರ್ಶೆ ನಡೆಸಿದ್ದಾರೆ ಎಂದೂ ಮೂಲಗಳು ಹೇಳಿವೆ.