<p><strong>ನವದೆಹಲಿ</strong>: ಅಗ್ನಿಪಥ ಯೋಜನೆ ವಿರೋಧಿಸಿ ದೇಶದ ಹಲವೆಡೆ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ಭಾರತೀಯ ಸೇನೆಯು ಅಗ್ನಿಪಥ ಮಿಲಿಟರಿ ನೇಮಕಾತಿ ಯೋಜನೆಯಡಿ ಅಗ್ನಿವೀರರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.</p>.<p>ಎಲ್ಲ ಉದ್ಯೋಗಾಕಾಂಕ್ಷಿಗಳು ಸೇನೆಯ ನೇಮಕಾತಿ ಜಾಲತಾಣದಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ ಎಂದು ಸೇನೆ ತಿಳಿಸಿದೆ. ಜುಲೈನಿಂದ ನೋಂದಣಿ ಆರಂಭವಾಗಲಿದೆ ಎಂದು ಅದು ಹೇಳಿದೆ.</p>.<p>ಭಾರತೀಯ ಸೇನೆಯಲ್ಲಿ 'ಅಗ್ನಿವೀರ'ರದ್ದು ಒಂದು ವಿಶಿಷ್ಟ ಶ್ರೇಣಿಯಾಗಿದ್ದು, ಅಸ್ತಿತ್ವದಲ್ಲಿರುವ ಯಾವುದೇ ಶ್ರೇಣಿಗಳಿಗಿಂತ ಭಿನ್ನವಾಗಿರುತ್ತದೆ ಎಂದು ಸೇನೆ ಹೇಳಿದೆ.</p>.<p>ಸೇನೆಯು ಕಳೆದ ರಾತ್ರಿ ಬಿಡುಗಡೆ ಮಾಡಿರುವ ಈ ಯೋಜನೆಯ ವಿವರವಾದ ಟಿಪ್ಪಣಿಯಲ್ಲಿ 'ಅಗ್ನಿವೀರ'ರು ನಾಲ್ಕು ವರ್ಷಗಳ ಸೇವಾ ಅವಧಿಯಲ್ಲಿ ಗಳಿಸಿದ ವರ್ಗೀಕೃತ ಮಾಹಿತಿ ಅಥವಾ ಮೂಲವನ್ನು ಯಾವುದೇ ಅನಧಿಕೃತ ವ್ಯಕ್ತಿಗೆ ಬಹಿರಂಗಪಡಿಸುವುದನ್ನು ಅಧಿಕೃತ ರಹಸ್ಯ ಕಾಯಿದೆ, 1923 ರ ಅಡಿಯಲ್ಲಿ ನಿರ್ಬಂಧಿಸಲಾಗಿದೆ ಎಂದು ತಿಳಿಸಲಾಗಿದೆ.</p>.<p>‘ಈ ಯೋಜನೆಯ ಜಾರಿಯೊಂದಿಗೆ, ವೈದ್ಯಕೀಯ ಶಾಖೆಯ ತಾಂತ್ರಿಕ ವರ್ಗಗಳನ್ನು ಹೊರತುಪಡಿಸಿ ಭಾರತೀಯ ಸೇನೆಯ ಸಾಮಾನ್ಯ ಕೇಡರ್ನಲ್ಲಿ ಯೋಧರ ದಾಖಲಾತಿಗೆ ಅಗ್ನಿವೀರರಾಗಿ ನಿಗದಿತ ಅವಧಿ ಪೂರ್ಣಗೊಳಿಸಿದ ಸಿಬ್ಬಂದಿಯನ್ನು ಮಾತ್ರ ಪರಿಗಣಿಸಲಾಗುತ್ತದೆ’ಎಂದು ಅದು ಹೇಳಿದೆ.</p>.<p>ಇದೇವೇಳೆ, ನಿಗದಿತ ಅವಧಿಗಿಂತ ಮೊದಲು ಅಗ್ನಿವೀರರನ್ನು ಅವರ ಮನವಿ ಮೇರೆಗೆ ಸೇವೆಯಿಂದ ಬಿಡುಗಡೆ ಮಾಡುವ ಅವಕಾಶ ಇಲ್ಲ ಎಂದು ಅದು ಹೇಳಿದೆ.</p>.<p>‘ಆದರೂ ವಿಶೇಷ ಸಂದರ್ಭಗಳಲ್ಲಿ, ಈ ಯೋಜನೆಯಡಿಯಲ್ಲಿ ದಾಖಲಾಗಿರುವ ಸಿಬ್ಬಂದಿಯನ್ನು ಸಕ್ಷಮ ಪ್ರಾಧಿಕಾರವು ಮಂಜೂರು ಮಾಡಿದರೆ ಸೇವೆಯಿಂದ ಬಿಡುಗಡೆ ಮಾಡಬಹುದು’ಎಂದು ಅದು ಹೇಳಿದೆ.</p>.<p>ಇದನ್ನೂ ಓದಿ..<a href="https://www.prajavani.net/india-news/vk-singh-says-if-you-dont-like-agnipath-dont-join-armed-forces-947176.html" itemprop="url">‘ಅಗ್ನಿಪಥ’ ಇಷ್ಟವಿಲ್ಲದಿದ್ದರೆ ಸಶಸ್ತ್ರ ಪಡೆಗಳಿಗೆ ಸೇರಬೇಡಿ: ವಿ.ಕೆ. ಸಿಂಗ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಅಗ್ನಿಪಥ ಯೋಜನೆ ವಿರೋಧಿಸಿ ದೇಶದ ಹಲವೆಡೆ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ಭಾರತೀಯ ಸೇನೆಯು ಅಗ್ನಿಪಥ ಮಿಲಿಟರಿ ನೇಮಕಾತಿ ಯೋಜನೆಯಡಿ ಅಗ್ನಿವೀರರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.</p>.<p>ಎಲ್ಲ ಉದ್ಯೋಗಾಕಾಂಕ್ಷಿಗಳು ಸೇನೆಯ ನೇಮಕಾತಿ ಜಾಲತಾಣದಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ ಎಂದು ಸೇನೆ ತಿಳಿಸಿದೆ. ಜುಲೈನಿಂದ ನೋಂದಣಿ ಆರಂಭವಾಗಲಿದೆ ಎಂದು ಅದು ಹೇಳಿದೆ.</p>.<p>ಭಾರತೀಯ ಸೇನೆಯಲ್ಲಿ 'ಅಗ್ನಿವೀರ'ರದ್ದು ಒಂದು ವಿಶಿಷ್ಟ ಶ್ರೇಣಿಯಾಗಿದ್ದು, ಅಸ್ತಿತ್ವದಲ್ಲಿರುವ ಯಾವುದೇ ಶ್ರೇಣಿಗಳಿಗಿಂತ ಭಿನ್ನವಾಗಿರುತ್ತದೆ ಎಂದು ಸೇನೆ ಹೇಳಿದೆ.</p>.<p>ಸೇನೆಯು ಕಳೆದ ರಾತ್ರಿ ಬಿಡುಗಡೆ ಮಾಡಿರುವ ಈ ಯೋಜನೆಯ ವಿವರವಾದ ಟಿಪ್ಪಣಿಯಲ್ಲಿ 'ಅಗ್ನಿವೀರ'ರು ನಾಲ್ಕು ವರ್ಷಗಳ ಸೇವಾ ಅವಧಿಯಲ್ಲಿ ಗಳಿಸಿದ ವರ್ಗೀಕೃತ ಮಾಹಿತಿ ಅಥವಾ ಮೂಲವನ್ನು ಯಾವುದೇ ಅನಧಿಕೃತ ವ್ಯಕ್ತಿಗೆ ಬಹಿರಂಗಪಡಿಸುವುದನ್ನು ಅಧಿಕೃತ ರಹಸ್ಯ ಕಾಯಿದೆ, 1923 ರ ಅಡಿಯಲ್ಲಿ ನಿರ್ಬಂಧಿಸಲಾಗಿದೆ ಎಂದು ತಿಳಿಸಲಾಗಿದೆ.</p>.<p>‘ಈ ಯೋಜನೆಯ ಜಾರಿಯೊಂದಿಗೆ, ವೈದ್ಯಕೀಯ ಶಾಖೆಯ ತಾಂತ್ರಿಕ ವರ್ಗಗಳನ್ನು ಹೊರತುಪಡಿಸಿ ಭಾರತೀಯ ಸೇನೆಯ ಸಾಮಾನ್ಯ ಕೇಡರ್ನಲ್ಲಿ ಯೋಧರ ದಾಖಲಾತಿಗೆ ಅಗ್ನಿವೀರರಾಗಿ ನಿಗದಿತ ಅವಧಿ ಪೂರ್ಣಗೊಳಿಸಿದ ಸಿಬ್ಬಂದಿಯನ್ನು ಮಾತ್ರ ಪರಿಗಣಿಸಲಾಗುತ್ತದೆ’ಎಂದು ಅದು ಹೇಳಿದೆ.</p>.<p>ಇದೇವೇಳೆ, ನಿಗದಿತ ಅವಧಿಗಿಂತ ಮೊದಲು ಅಗ್ನಿವೀರರನ್ನು ಅವರ ಮನವಿ ಮೇರೆಗೆ ಸೇವೆಯಿಂದ ಬಿಡುಗಡೆ ಮಾಡುವ ಅವಕಾಶ ಇಲ್ಲ ಎಂದು ಅದು ಹೇಳಿದೆ.</p>.<p>‘ಆದರೂ ವಿಶೇಷ ಸಂದರ್ಭಗಳಲ್ಲಿ, ಈ ಯೋಜನೆಯಡಿಯಲ್ಲಿ ದಾಖಲಾಗಿರುವ ಸಿಬ್ಬಂದಿಯನ್ನು ಸಕ್ಷಮ ಪ್ರಾಧಿಕಾರವು ಮಂಜೂರು ಮಾಡಿದರೆ ಸೇವೆಯಿಂದ ಬಿಡುಗಡೆ ಮಾಡಬಹುದು’ಎಂದು ಅದು ಹೇಳಿದೆ.</p>.<p>ಇದನ್ನೂ ಓದಿ..<a href="https://www.prajavani.net/india-news/vk-singh-says-if-you-dont-like-agnipath-dont-join-armed-forces-947176.html" itemprop="url">‘ಅಗ್ನಿಪಥ’ ಇಷ್ಟವಿಲ್ಲದಿದ್ದರೆ ಸಶಸ್ತ್ರ ಪಡೆಗಳಿಗೆ ಸೇರಬೇಡಿ: ವಿ.ಕೆ. ಸಿಂಗ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>