ಬನಿಹಾಲ್/ಜಮ್ಮು: ‘ಜಮ್ಮು ಮತ್ತು ಕಾಶ್ಮೀರದ ರಾಮಬನ್ ಜಿಲ್ಲೆಯ ಸೇನಾ ಶಿಬಿರದಲ್ಲಿ ಕರ್ನಾಟಕ ಮೂಲದ ಯೋಧರೊಬ್ಬರು ತನ್ನ ಸರ್ವೀಸ್ ರೈಫಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಮಂಗಳವಾರ ನಸುಕಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಯೋಧನನ್ನು ಕರ್ನಾಟಕದ ಅಸಂಗೆಪ್ಪ ಮಾದರ (28) ಎಂದು ಗುರುತಿಸಲಾಗಿದೆ. ಅವರನ್ನು ಬನಿಹಾಲ್ನ ಆರ್–ಸೆಂಟರ್ ಕ್ಯಾಂಪ್ನಲ್ಲಿ ನಿಯೋಜಿಸಲಾಗಿತ್ತು’ ಎಂದು ಅವರು ಹೇಳಿದರು.