ಶ್ರೀನಗರ: ‘ಜಮ್ಮು ಮತ್ತು ಕಾಶ್ಮೀರದಖೊನ್ಮೋಹ್ ಪ್ರದೇಶದಲ್ಲಿ ಸೇನೆಯ ಯುದ್ಧ ಸಾಮಗ್ರಿ ಸಂಗ್ರಹಾಗಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೇನಾ ಅಧಿಕಾರಿಯೊಬ್ಬರು ಬುಧವಾರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದರು.
‘ಲೆಫ್ಟಿನೆಂಟ್ ಕರ್ನಲ್ ಸುದೀಪ್ ಭಗತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ರೀತಿಯ ನಿರ್ಧಾರವನ್ನು ಅವರು ಏಕೆ ತೆಗೆದುಕೊಂಡರು ಎನ್ನುವುದಕ್ಕೆ ಯಾವುದೇ ಕಾರಣ ತಿಳಿದುಬಂದಿಲ್ಲ’ ಎಂದು ಅವರು ಹೇಳಿದರು.