<p><strong>ಬಲಿಯಾ (ಉತ್ತರ ಪ್ರದೇಶ):</strong> ಕೋವಿಡ್ನಿಂದಾಗಿ ದೇಶದಲ್ಲಿ 3 ಲಕ್ಷಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು ಈ ಸಾಂಕ್ರಾಮಿಕ ಸೋಂಕನ್ನು ನಿಯಂತ್ರಿಸಲು ದೇಶದ ಜನರಿಗೆಅಗತ್ಯ ನೆರವು ನೀಡಲು ಸೇನೆ ಸಿದ್ಧವಿದೆ ಎಂದು ಸೇನಾಪಡೆಗಳ ಮುಖ್ಯಸ್ಥ ಜ. ಬಿಪಿನ್ ರಾವತ್ ಹೇಳಿದ್ದಾರೆ.</p>.<p>ಉತ್ತರ ಪ್ರದೇಶದ ಬಲಿಯಾ ಜಿಲ್ಲೆಯಲ್ಲಿ ಸಾಮಾಜಿಕ ಸಂಘಟನೆಯೊಂದು ಆಯೋಜಿಸಿದ್ದ ವರ್ಚುವಲ್ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಸೋಂಕು ಹರಡುವುದನ್ನು ತಡೆಯಲು, ಜನರು ಒಟ್ಟಾಗಿ ಕೆಲಸ ಮಾಡಬೇಕಾದ ಅಗತ್ಯವಿದೆ. ಇದಕ್ಕಾಗಿ ಸೇನೆ ಮೂಲಕ ಅಗತ್ಯ ವೈದ್ಯಕೀಯ ಹಾಗೂ ಮೂಲ ಸೌಕರ್ಯಗಳ ನೆರವು ನೀಡಲಾಗುವುದು ಎಂದು ರಾವತ್ ಹೇಳಿದ್ದಾರೆ.</p>.<p>ಕೇಂದ್ರ ಆರೋಗ್ಯ ಸಚಿವಾಲಯದ ದತ್ತಾಂಶದ ಪ್ರಕಾರ, ಭಾರತದಲ್ಲಿ ಭಾನುವಾರ 2.4 ಲಕ್ಷ ಹೊಸ ಕೋವಿಡ್-19 ಪ್ರಕರಣಗಳು ಮತ್ತು 3,741 ಸಾವುಗಳು ದಾಖಲಾಗಿವೆ. ಸೋಂಕಿನಲ್ಲಿ ಇಳಿಕೆ ಕಂಡುಬಂದರೂ ಸಾವಿನ ಪ್ರಮಾಣ ಆತಂಕ ಸೃಷ್ಟಿಸಿದೆ ಎಂದು ಅವರು ಹೇಳಿದರು.</p>.<p>ಭಾರತೀಯ ಸೇನೆ ದೇಶದ ಜನತೆಗೆ ಸಹಾಯ ಮಾಡಲು ಸದಾ ಸಿದ್ಧವಿರುತ್ತದೆ ಎಂದು ರಾವತ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಲಿಯಾ (ಉತ್ತರ ಪ್ರದೇಶ):</strong> ಕೋವಿಡ್ನಿಂದಾಗಿ ದೇಶದಲ್ಲಿ 3 ಲಕ್ಷಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು ಈ ಸಾಂಕ್ರಾಮಿಕ ಸೋಂಕನ್ನು ನಿಯಂತ್ರಿಸಲು ದೇಶದ ಜನರಿಗೆಅಗತ್ಯ ನೆರವು ನೀಡಲು ಸೇನೆ ಸಿದ್ಧವಿದೆ ಎಂದು ಸೇನಾಪಡೆಗಳ ಮುಖ್ಯಸ್ಥ ಜ. ಬಿಪಿನ್ ರಾವತ್ ಹೇಳಿದ್ದಾರೆ.</p>.<p>ಉತ್ತರ ಪ್ರದೇಶದ ಬಲಿಯಾ ಜಿಲ್ಲೆಯಲ್ಲಿ ಸಾಮಾಜಿಕ ಸಂಘಟನೆಯೊಂದು ಆಯೋಜಿಸಿದ್ದ ವರ್ಚುವಲ್ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಸೋಂಕು ಹರಡುವುದನ್ನು ತಡೆಯಲು, ಜನರು ಒಟ್ಟಾಗಿ ಕೆಲಸ ಮಾಡಬೇಕಾದ ಅಗತ್ಯವಿದೆ. ಇದಕ್ಕಾಗಿ ಸೇನೆ ಮೂಲಕ ಅಗತ್ಯ ವೈದ್ಯಕೀಯ ಹಾಗೂ ಮೂಲ ಸೌಕರ್ಯಗಳ ನೆರವು ನೀಡಲಾಗುವುದು ಎಂದು ರಾವತ್ ಹೇಳಿದ್ದಾರೆ.</p>.<p>ಕೇಂದ್ರ ಆರೋಗ್ಯ ಸಚಿವಾಲಯದ ದತ್ತಾಂಶದ ಪ್ರಕಾರ, ಭಾರತದಲ್ಲಿ ಭಾನುವಾರ 2.4 ಲಕ್ಷ ಹೊಸ ಕೋವಿಡ್-19 ಪ್ರಕರಣಗಳು ಮತ್ತು 3,741 ಸಾವುಗಳು ದಾಖಲಾಗಿವೆ. ಸೋಂಕಿನಲ್ಲಿ ಇಳಿಕೆ ಕಂಡುಬಂದರೂ ಸಾವಿನ ಪ್ರಮಾಣ ಆತಂಕ ಸೃಷ್ಟಿಸಿದೆ ಎಂದು ಅವರು ಹೇಳಿದರು.</p>.<p>ಭಾರತೀಯ ಸೇನೆ ದೇಶದ ಜನತೆಗೆ ಸಹಾಯ ಮಾಡಲು ಸದಾ ಸಿದ್ಧವಿರುತ್ತದೆ ಎಂದು ರಾವತ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>