‘ಹೈಕಮಾಂಡ್ ಬಯಸಿದಲ್ಲಿ ನಾಯಕತ್ವ ಬಿಟ್ಟುಕೊಡುವೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇತ್ತೀಚೆಗೆ ಹೇಳಿಕೆ ನೀಡಿರುವ ಬೆನ್ನಲ್ಲೇ, ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಚರ್ಚೆಗಳ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ವರಿಷ್ಠರು, ಸಚಿವರು ಮತ್ತು ಶಾಸಕರಿಗೆ ಮೌಖಿಕ ಎಚ್ಚರಿಕೆ ನೀಡುವಂತೆ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರಿಗೆ ಸೂಚಿಸಿದ್ದಾರೆ.