<p><strong>ಗುವಾಹಟಿ</strong>: ಭಾರತ–ಚೀನಾ ಗಡಿ ಸಮೀಪ ಮಂಗಳವಾರ ಸಂಜೆ ಬೇಟೆಯಾಡಲು ತೆರಳಿದ್ದ 17 ವರ್ಷದ ಯುವಕನೊಬ್ಬನನ್ನು ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ(ಪಿಎಲ್ಎ) ಅಪಹರಿಸಿದೆ ಎಂದು ಅರುಣಾಚಲ ಪ್ರದೇಶದ ಕಾಂಗ್ರೆಸ್ ಶಾಸಕ ಮತ್ತು ಬಿಜೆಪಿ ಸಂಸದರೊಬ್ಬರು ಟ್ವೀಟ್ ಮಾಡಿದ್ದಾರೆ.</p>.<p>‘ಸಿಯಾಂಗ್ ಜಿಲ್ಲೆಯ ಝಿಡೋ ಗ್ರಾಮದ ನಿವಾಸಿಮಿರಾಮ್ ತರೊನ್ ತನ್ನ ಸ್ನೇಹಿತನೊಂದಿಗೆ ಮಂಗಳವಾರ ಸಂಜೆ ಸುಮಾರು 6.30ಕ್ಕೆ ಬಿಶಿಂಗ್ ಗ್ರಾಮದ ಬಳಿ ಬೇಟೆಯಾಡಲು ಹೋಗಿದ್ದರು. ಈ ವೇಳೆ ಪಿಎಲ್ಎ ಮಿರಾಮ್ನನ್ನು ಅಪಹರಿಸಿದೆ. ಬಾಲಕನನ್ನು ರಕ್ಷಿಸಿ ಕರೆತರಲುವಿದೇಶಾಂಗ ವ್ಯವಹಾರಗಳ ಸಚಿವಾಲಯ ಕ್ರಮಕೈಗೊಳ್ಳಬೇಕು’ ಎಂದು ಬಿಜೆಪಿ ಸಂಸದ ತಾಪಿರ್ ಗಾವೊ ಅವರು ಟ್ವಿಟರ್ನಲ್ಲಿ ಮನವಿ ಮಾಡಿದ್ದಾರೆ.</p>.<p>‘ಮಿರಾಮ್ನೊಂದಿಗಿದ್ದ ಜಾನಿ ಯಾಯಿಂಗ್ ಪಿಎಲ್ಎನಿಂದ ತಪ್ಪಿಸಿಕೊಂಡು ಬಂದು, ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾನೆ’ ಎಂದು ಮೂಲಗಳು ಹೇಳಿವೆ.</p>.<p>ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಶಾಸಕ ನಿನಾಂಗ್ ಎರಿಂಗ್ ಅವರು,‘ ಬಾಲಕನನ್ನು ಸುರಕ್ಷಿತವಾಗಿ ವಾಪಾಸು ಕರೆತರಲು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸಹಾಯ ಮಾಡಬೇಕು. ಜತೆಗೆ, ಚೀನಾದ ನುಸುಳುಕೋರರ ಬಗ್ಗೆ ಪರಿಶೀಲನೆ ನಡೆಸಬೇಕು’ ಎಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ</strong>: ಭಾರತ–ಚೀನಾ ಗಡಿ ಸಮೀಪ ಮಂಗಳವಾರ ಸಂಜೆ ಬೇಟೆಯಾಡಲು ತೆರಳಿದ್ದ 17 ವರ್ಷದ ಯುವಕನೊಬ್ಬನನ್ನು ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ(ಪಿಎಲ್ಎ) ಅಪಹರಿಸಿದೆ ಎಂದು ಅರುಣಾಚಲ ಪ್ರದೇಶದ ಕಾಂಗ್ರೆಸ್ ಶಾಸಕ ಮತ್ತು ಬಿಜೆಪಿ ಸಂಸದರೊಬ್ಬರು ಟ್ವೀಟ್ ಮಾಡಿದ್ದಾರೆ.</p>.<p>‘ಸಿಯಾಂಗ್ ಜಿಲ್ಲೆಯ ಝಿಡೋ ಗ್ರಾಮದ ನಿವಾಸಿಮಿರಾಮ್ ತರೊನ್ ತನ್ನ ಸ್ನೇಹಿತನೊಂದಿಗೆ ಮಂಗಳವಾರ ಸಂಜೆ ಸುಮಾರು 6.30ಕ್ಕೆ ಬಿಶಿಂಗ್ ಗ್ರಾಮದ ಬಳಿ ಬೇಟೆಯಾಡಲು ಹೋಗಿದ್ದರು. ಈ ವೇಳೆ ಪಿಎಲ್ಎ ಮಿರಾಮ್ನನ್ನು ಅಪಹರಿಸಿದೆ. ಬಾಲಕನನ್ನು ರಕ್ಷಿಸಿ ಕರೆತರಲುವಿದೇಶಾಂಗ ವ್ಯವಹಾರಗಳ ಸಚಿವಾಲಯ ಕ್ರಮಕೈಗೊಳ್ಳಬೇಕು’ ಎಂದು ಬಿಜೆಪಿ ಸಂಸದ ತಾಪಿರ್ ಗಾವೊ ಅವರು ಟ್ವಿಟರ್ನಲ್ಲಿ ಮನವಿ ಮಾಡಿದ್ದಾರೆ.</p>.<p>‘ಮಿರಾಮ್ನೊಂದಿಗಿದ್ದ ಜಾನಿ ಯಾಯಿಂಗ್ ಪಿಎಲ್ಎನಿಂದ ತಪ್ಪಿಸಿಕೊಂಡು ಬಂದು, ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾನೆ’ ಎಂದು ಮೂಲಗಳು ಹೇಳಿವೆ.</p>.<p>ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಶಾಸಕ ನಿನಾಂಗ್ ಎರಿಂಗ್ ಅವರು,‘ ಬಾಲಕನನ್ನು ಸುರಕ್ಷಿತವಾಗಿ ವಾಪಾಸು ಕರೆತರಲು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸಹಾಯ ಮಾಡಬೇಕು. ಜತೆಗೆ, ಚೀನಾದ ನುಸುಳುಕೋರರ ಬಗ್ಗೆ ಪರಿಶೀಲನೆ ನಡೆಸಬೇಕು’ ಎಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>