<p><strong>ಸೂರತ್ (ಗುಜರಾತ್):</strong> ಗುಜರಾತ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎಎಪಿ ಗಮನಾರ್ಹ ಸಾಧನೆ ಮಾಡಿದೆ. ಇದರಂತೆ ಶುಕ್ರವಾರ ಸೂರತ್ಗೆ ಭೇಟಿ ನೀಡಿರುವ ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ಮುಖಂಡ ಅರವಿಂದ್ ಕೇಜ್ರಿವಾಲ್ ಅಲ್ಲಿನ ಜನತೆಗೆಧನ್ಯವಾದಗಳನ್ನು ಸಲ್ಲಿಸಿದ್ದಾರೆ.</p>.<p>ಗುಜರಾತ್ ಪಾಲಿಕೆ ಚುನಾವಣೆಯಲ್ಲಿ ಎಎಪಿ 27 ಸೀಟುಗಳಲ್ಲಿ ಗೆಲುವು ಬಾರಿಸಿದೆ. ನಾನು ಸೂರತ್ ಜನರಿಗೆ ಧನ್ಯವಾದ ಸಲ್ಲಿಸಲು ಆಗಮಿಸಿದ್ದೇನೆ ಎಂದು ಕೇಜ್ರಿವಾಲ್ ತಿಳಿಸಿದರು.</p>.<p>ಮಧ್ಯಾಹ್ನದ ಬಳಿಕ ರೋಡ್ ಶೋನದಲ್ಲಿ ಕೇಜ್ರಿವಾಲ್ ಭಾಗವಹಿಸಲಿದ್ದಾರೆ. ಹಾಗೆಯೇ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.</p>.<p>ಸೂರತ್ ಮುನ್ಸಿಪಲ್ ಕಾರ್ಪೋರೇಷನ್ಗೆ (ಎಸ್ಎಂಸಿ) ನಡೆದ ಚುನಾವಣೆಯಲ್ಲಿ ಎಎಪಿ 27 ಸ್ಥಾನಗಳಲ್ಲಿ ಜಯಭೇರಿ ಮೊಳಗಿಸಿತ್ತು.</p>.<p>ಇದನ್ನೂ ಓದಿ:<a href="https://www.prajavani.net/india-news/national-medical-commission-will-bring-great-transparency-says-pm-modi-808809.html" itemprop="url">ಎನ್ಎಂಸಿಯಿಂದ ಪಾರದರ್ಶಕತೆ: ಮೋದಿ </a></p>.<p>120 ಸೀಟುಗಳ ಪೈಕಿ ಬಿಜೆಪಿ 93ರಲ್ಲಿ ಗೆಲುವು ದಾಖಲಿಸಿದರೂ ಎಎಪಿ ಸಾಧನೆ ಹೆಚ್ಚಿನ ಗಮನ ಸೆಳೆದಿದೆ. 2015ರಲ್ಲಿ 36 ಸೀಟುಗಳನ್ನು ಗೆದ್ದಿದ್ದ ಕಾಂಗ್ರೆಸ್ಗೆ ಒಂದೇ ಒಂದು ಸೀಟು ಗೆಲ್ಲಲು ಸಾಧ್ಯವಾಗಲಿಲ್ಲ.</p>.<p>ನಾವು 27 ಸೀಟುಗಳಲ್ಲಿ ಗೆದ್ದಿದ್ದು, ಅವರು (ಬಿಜೆಪಿ) 93 ಸೀಟುಗಳಲ್ಲಿ ಜಯ ಗಳಿಸಿದೆ. ಆದರೆ ಅಂಕಿ ಬಗ್ಗೆ ನಾವು ಚಿಂತಿತರಾಗಿಲ್ಲ. ಸೂರತ್ ಜನರು ನಮಗೆವಿರೋಧ ಪಕ್ಷದ ಜವಾಬ್ದಾರಿಯನ್ನು ನೀಡಿದ್ದಾರೆ ಎಂದು ಕೇಜ್ರಿವಾಲ್ ಹೇಳಿದರು.</p>.<p>ಒಟ್ಟಾರೆಯಾಗಿ ಆರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 576 ಸೀಟುಗಳ ಪೈಕಿ 483ರಲ್ಲಿ ಪ್ರಚಂಡ ಗೆಲುವು ದಾಖಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೂರತ್ (ಗುಜರಾತ್):</strong> ಗುಜರಾತ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎಎಪಿ ಗಮನಾರ್ಹ ಸಾಧನೆ ಮಾಡಿದೆ. ಇದರಂತೆ ಶುಕ್ರವಾರ ಸೂರತ್ಗೆ ಭೇಟಿ ನೀಡಿರುವ ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ಮುಖಂಡ ಅರವಿಂದ್ ಕೇಜ್ರಿವಾಲ್ ಅಲ್ಲಿನ ಜನತೆಗೆಧನ್ಯವಾದಗಳನ್ನು ಸಲ್ಲಿಸಿದ್ದಾರೆ.</p>.<p>ಗುಜರಾತ್ ಪಾಲಿಕೆ ಚುನಾವಣೆಯಲ್ಲಿ ಎಎಪಿ 27 ಸೀಟುಗಳಲ್ಲಿ ಗೆಲುವು ಬಾರಿಸಿದೆ. ನಾನು ಸೂರತ್ ಜನರಿಗೆ ಧನ್ಯವಾದ ಸಲ್ಲಿಸಲು ಆಗಮಿಸಿದ್ದೇನೆ ಎಂದು ಕೇಜ್ರಿವಾಲ್ ತಿಳಿಸಿದರು.</p>.<p>ಮಧ್ಯಾಹ್ನದ ಬಳಿಕ ರೋಡ್ ಶೋನದಲ್ಲಿ ಕೇಜ್ರಿವಾಲ್ ಭಾಗವಹಿಸಲಿದ್ದಾರೆ. ಹಾಗೆಯೇ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.</p>.<p>ಸೂರತ್ ಮುನ್ಸಿಪಲ್ ಕಾರ್ಪೋರೇಷನ್ಗೆ (ಎಸ್ಎಂಸಿ) ನಡೆದ ಚುನಾವಣೆಯಲ್ಲಿ ಎಎಪಿ 27 ಸ್ಥಾನಗಳಲ್ಲಿ ಜಯಭೇರಿ ಮೊಳಗಿಸಿತ್ತು.</p>.<p>ಇದನ್ನೂ ಓದಿ:<a href="https://www.prajavani.net/india-news/national-medical-commission-will-bring-great-transparency-says-pm-modi-808809.html" itemprop="url">ಎನ್ಎಂಸಿಯಿಂದ ಪಾರದರ್ಶಕತೆ: ಮೋದಿ </a></p>.<p>120 ಸೀಟುಗಳ ಪೈಕಿ ಬಿಜೆಪಿ 93ರಲ್ಲಿ ಗೆಲುವು ದಾಖಲಿಸಿದರೂ ಎಎಪಿ ಸಾಧನೆ ಹೆಚ್ಚಿನ ಗಮನ ಸೆಳೆದಿದೆ. 2015ರಲ್ಲಿ 36 ಸೀಟುಗಳನ್ನು ಗೆದ್ದಿದ್ದ ಕಾಂಗ್ರೆಸ್ಗೆ ಒಂದೇ ಒಂದು ಸೀಟು ಗೆಲ್ಲಲು ಸಾಧ್ಯವಾಗಲಿಲ್ಲ.</p>.<p>ನಾವು 27 ಸೀಟುಗಳಲ್ಲಿ ಗೆದ್ದಿದ್ದು, ಅವರು (ಬಿಜೆಪಿ) 93 ಸೀಟುಗಳಲ್ಲಿ ಜಯ ಗಳಿಸಿದೆ. ಆದರೆ ಅಂಕಿ ಬಗ್ಗೆ ನಾವು ಚಿಂತಿತರಾಗಿಲ್ಲ. ಸೂರತ್ ಜನರು ನಮಗೆವಿರೋಧ ಪಕ್ಷದ ಜವಾಬ್ದಾರಿಯನ್ನು ನೀಡಿದ್ದಾರೆ ಎಂದು ಕೇಜ್ರಿವಾಲ್ ಹೇಳಿದರು.</p>.<p>ಒಟ್ಟಾರೆಯಾಗಿ ಆರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 576 ಸೀಟುಗಳ ಪೈಕಿ 483ರಲ್ಲಿ ಪ್ರಚಂಡ ಗೆಲುವು ದಾಖಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>