ಇದಕ್ಕೆ ಎಎಪಿ ನಾಯಕ ರಾಘವ್ ಚಡ್ಡಾ ತಿರುಗೇಟು ನೀಡಿದ್ದು, ಕೇಂದ್ರ ಸಚಿವರು ರಾಜಕೀಯ ಮಾಡುವುದರಲ್ಲಷ್ಟೇ ಆಸಕ್ತರಾಗಿದ್ದಾರೆ ಎಂದು ಹೇಳಿದ್ದಾರೆ. ಸಮಸ್ಯೆಯ ಬಗ್ಗೆ ಅರಿತುಕೊಳ್ಳಲು ಹಾಗೂ ಪರಿಹಾರ ಕಂಡುಕೊಳ್ಳಲು ದೆಹಲಿ, ಉತ್ತರ ಪ್ರದೇಶ ಹಾಗೂ ಹರಿಯಾಣ ಸರ್ಕಾರಗಳ ಸಭೆ ಕರೆದು ಚರ್ಚಿಸುವ ಬದಲು ಶೇಖಾವತ್ ಅವರು ರಾಜಕೀಯ ಹೇಳಿಕೆಗಳನ್ನು ನೀಡುವುದರಲ್ಲಿ ನಿರತರಾಗಿದ್ದಾರೆ ಎಂದು ಅವರು ದೂರಿದ್ದಾರೆ.