<p><strong>ನವದೆಹಲಿ</strong>: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ.</p>.<p>ಉಭಯ ನಾಯಕರ ನಡುವಿನ ಚರ್ಚೆಯು ಸುಮಾರು ಒಂದು ಗಂಟೆ ಕಾಲ ನಡೆದಿದೆ. </p>.<p>ದೇಶದ ಒಕ್ಕೂಟ ವ್ಯವಸ್ಥೆ, ರಾಷ್ಟ್ರ ಬೆಳವಣಿಗೆಯಲ್ಲಿ ರಾಜ್ಯಗಳ ಕೊಡುಗೆ ಹಾಗೂ ರಾಷ್ಟ್ರ ರಾಜಕಾರಣದ ಕುರಿತು ಉಭಯ ಮುಖ್ಯಮಂತ್ರಿಗಳು ಚರ್ಚೆ ನಡೆಸಿದ್ದಾರೆ ಎಂದು ಸಿಎಂ (ಕೆಸಿಆರ್) ಕಚೇರಿ ತಿಳಿಸಿದೆ.<br /><br />ರಾಷ್ಟ್ರ ಮಟ್ಟದಲ್ಲಿ ಪರ್ಯಾಯ ರಾಜಕೀಯ ಕಾರ್ಯಸೂಚಿಯನ್ನು ರೂಪಿಸುವ ಕುರಿತು ಕೆಸಿಆರ್ ಅವರು ಕೇಜ್ರಿವಾಲ್ರೊಂದಿಗೆ ಚರ್ಚೆ ನಡೆಸಿದ್ದಾರೆ ಎಂಬ ಮಾತುಗಳೂ ಮುನ್ನೆಲೆಗೆ ಬಂದಿವೆ. </p>.<p>ಮಾತುಕತೆಯ ಬಳಿಕ ಉಭಯ ನಾಯಕರು ಚಂಡೀಗಢಕ್ಕೆ ತೆರಳಿದ್ದಾರೆ. ಕೃಷಿ ಕಾನೂನುಗಳ ವಿರುದ್ಧ ನಡೆದ ಹೋರಾಟದಲ್ಲಿ ಮೃತಪಟ್ಟ ರೈತರ ನಿವಾಸಗಳಿಗೆ ಅವರು ಭೇಟಿ ನೀಡಿಲಿದ್ದಾರೆ. ಇದೇ ವೇಳೆ, ಸಂತ್ರಸ್ತ ಕುಟುಂಬಗಳಿಗೆ ₹3 ಲಕ್ಷ ಚೆಕ್ ಅನ್ನು ಕೆಸಿಆರ್ ವಿತರಿಸಲಿದ್ದಾರೆ.</p>.<p>ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರನ್ನೂ ಕೆಸಿಆರ್ ಶನಿವಾರ ಭೇಟಿ ಮಾಡಿರುವುದು ರಾಷ್ಟ್ರ ರಾಜಕೀಯದಲ್ಲಿ ಮಹತ್ವ ಪಡೆದುಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ.</p>.<p>ಉಭಯ ನಾಯಕರ ನಡುವಿನ ಚರ್ಚೆಯು ಸುಮಾರು ಒಂದು ಗಂಟೆ ಕಾಲ ನಡೆದಿದೆ. </p>.<p>ದೇಶದ ಒಕ್ಕೂಟ ವ್ಯವಸ್ಥೆ, ರಾಷ್ಟ್ರ ಬೆಳವಣಿಗೆಯಲ್ಲಿ ರಾಜ್ಯಗಳ ಕೊಡುಗೆ ಹಾಗೂ ರಾಷ್ಟ್ರ ರಾಜಕಾರಣದ ಕುರಿತು ಉಭಯ ಮುಖ್ಯಮಂತ್ರಿಗಳು ಚರ್ಚೆ ನಡೆಸಿದ್ದಾರೆ ಎಂದು ಸಿಎಂ (ಕೆಸಿಆರ್) ಕಚೇರಿ ತಿಳಿಸಿದೆ.<br /><br />ರಾಷ್ಟ್ರ ಮಟ್ಟದಲ್ಲಿ ಪರ್ಯಾಯ ರಾಜಕೀಯ ಕಾರ್ಯಸೂಚಿಯನ್ನು ರೂಪಿಸುವ ಕುರಿತು ಕೆಸಿಆರ್ ಅವರು ಕೇಜ್ರಿವಾಲ್ರೊಂದಿಗೆ ಚರ್ಚೆ ನಡೆಸಿದ್ದಾರೆ ಎಂಬ ಮಾತುಗಳೂ ಮುನ್ನೆಲೆಗೆ ಬಂದಿವೆ. </p>.<p>ಮಾತುಕತೆಯ ಬಳಿಕ ಉಭಯ ನಾಯಕರು ಚಂಡೀಗಢಕ್ಕೆ ತೆರಳಿದ್ದಾರೆ. ಕೃಷಿ ಕಾನೂನುಗಳ ವಿರುದ್ಧ ನಡೆದ ಹೋರಾಟದಲ್ಲಿ ಮೃತಪಟ್ಟ ರೈತರ ನಿವಾಸಗಳಿಗೆ ಅವರು ಭೇಟಿ ನೀಡಿಲಿದ್ದಾರೆ. ಇದೇ ವೇಳೆ, ಸಂತ್ರಸ್ತ ಕುಟುಂಬಗಳಿಗೆ ₹3 ಲಕ್ಷ ಚೆಕ್ ಅನ್ನು ಕೆಸಿಆರ್ ವಿತರಿಸಲಿದ್ದಾರೆ.</p>.<p>ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರನ್ನೂ ಕೆಸಿಆರ್ ಶನಿವಾರ ಭೇಟಿ ಮಾಡಿರುವುದು ರಾಷ್ಟ್ರ ರಾಜಕೀಯದಲ್ಲಿ ಮಹತ್ವ ಪಡೆದುಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>