ನವದೆಹಲಿ: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಭೇಟಿಯಾಗಲಿದ್ದಾರೆ.
ದೆಹಲಿ ವಿಧಾನಸಭೆಗೆ ರೈತ ಮುಖಂಡರನ್ನು ಆಹ್ವಾನಿಸಿರುವ ಕೇಜ್ರಿವಾಲ್ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಈ ಬಗ್ಗೆ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಆಮ್ ಆದ್ಮಿ ಪಕ್ಷವು, 'ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನಾಳೆ(ಭಾನುವಾರ) ದೆಹಲಿ ವಿಧಾನಸಭೆಯಲ್ಲಿ ಸಂವಾದ ನಡೆಸಲು ರೈತ ಮುಖಂಡರನ್ನು ಆಹ್ವಾನಿಸಿದ್ದಾರೆ. ಎಎಪಿ ರೈತರ ಪರವಾಗಿದೆ' ಎಂದು ಹೇಳಿದೆ.
Hon'ble CM Shri @ArvindKejriwal invites farmer leaders for a dialogue in Delhi Vidhan Sabha tomorrow.