ಮನೋಹರ್ ಪರ್ರೀಕರ್ ಅವರು ಸ್ಪರ್ಧಿಸಿದ್ದ ಪಣಜಿ ಕ್ಷೇತ್ರದಲ್ಲಿ ಉತ್ಪಲ್ ಅವರು ಮನೆ–ಮನೆ ಭೇಟಿಯನ್ನು ಈಗಾಗಲೇ ಆರಂಭಿಸಿದ್ದಾರೆ. ಮನೋಹರ್ ಪರ್ರೀಕರ್ ಅವರು 2019ರಲ್ಲಿ ನಿಧನರಾದ ಬಳಿಕ ಬಿಜೆಪಿಯು ಯುವ ಅಭ್ಯರ್ಥಿ ಸಿದ್ಧಾರ್ಥ್ ಕುಂಚಲೇಂಕರ್ ಅವರನ್ನು ಕಣಕ್ಕಿಳಿಸಿತ್ತು. ಆ ಉಪಚುನಾವಣೆಯಲ್ಲು ಗೋವಾದ ಪ್ರಬಲ ಅಭ್ಯರ್ಥಿ, ಆಗ ಕಾಂಗ್ರೆಸ್ನಲ್ಲಿದ್ದ ಅಟನಾಸಿಯೊ ಮಾನ್ಸೆರಟೆ (ಬಾಬುಷ್) ಗೆಲುವು ಸಾಧಿಸಿದ್ದರು.